ಉಪ್ಪಿನಂಗಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ 2025-26 ರ ಶೈಕ್ಷಣಿಕ ಅವಧಿಯ ಪ್ರಾರಂಭೋತ್ಸವವನ್ನು ಜೂ.2ರಂದು ಶಾಲೆಯ ಮುಖ್ಯಗುರುಗಳು ಶಿಕ್ಷಕರು ಮತ್ತು ಶಾಲಾಭಿವೃಧಿ ಸಮಿತಿ ಸದಸ್ಯರು ಮಕ್ಕಳಿಗೆ ಸಿಹಿಹಂಚುವ ಮೂಲಕ ಸ್ವಾಗತವನ್ನು ನೀಡಿದರು.


ಕೆಮ್ಮಾರ ಸರಕಾರಿ ಶಾಲೆಯ ಮುಖ್ಯ ಗುರುಗಳಾದ ಜಯಶ್ರಿ ಎಂ ಸಭಿಕರನ್ನು ಸ್ವಾಗತಿಸಿದರು. ಪೋಷಕರು ಮತ್ತು ಮಕ್ಕಳ ನಡುವಿನ ಭಾಂಧವ್ಯ ಉತ್ತಮವಾಗಿದ್ದಲ್ಲಿ ಮಕ್ಕಳು ಕಲಿಕಾ ಸಾಮರ್ಥ್ಯ ಮತ್ತಷ್ಟು ವೃಧ್ದಿಯಾಗಲಿದೆ ಎಂದು ಪ್ರಾಸ್ತಾವಿಕ ನುಡಿಗೈದರು.
ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಶಾಲಾಭಿವೃಧ್ದಿ ಸಮಿತಿ ಅಧ್ಯಕ್ಷರಾದ ಅಝೀಝ್ ಬಿ.ಕೆ ನೆರವೇರಿಸಿ, ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಸವಿವರವಾಗಿ ತಿಳಿಸಿದರು.
ಹಿರೆಬಂಡಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ವಾರಿಜಾಕ್ಷಿ ಪ್ರಸಕ್ತ ಶಾಲಿನ ಶೈಕ್ಷಣಿಕ ವರ್ಷಕ್ಕೆ ಶುಭಕೋರಿದರು.

ಈ ಸಂದರ್ಭದಲ್ಲಿ ದಾನಿಗಳಾದ ಮಾಲತಿ ಹರಿನಾರಾಯಣ ಮತ್ತು ಸಹೋದರಿ ಶ್ಯಾಮಲಾಂಗಿ ಕೊಡಮಾಡಿದ ಬರೆಯುವ ಪುಸ್ತಕವನ್ನು ಹರಿನಾರಾಯಣರವರು ವಿದ್ಯಾರ್ಥಿಗಳಿಗೆ ವಿತರಿಸಿದರು. ಇವರು ಇಲ್ಲಿನ ಹಿರಿಯ ವಿದ್ಯಾರ್ಥಿಯಾಗಿದ್ದು ಪ್ರತೀ ವರ್ಷವೂ ಪುಸ್ತಕಗಳನ್ನು ನೀಡಿ ಸಹಕರಿಸುತ್ತಿದ್ದಾರೆ. ಶಾಲಾಭಿವೃಧ್ದಿ ಸಮಿತಿ ವತಿಯಿಂದ ಮಕ್ಕಳಿಗೆ ಪಾಯಸದ ಊಟವನ್ನು ಏರ್ಪಡಿಸಿದ್ದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ತೇಜಾವತಿ, ಹಿರಿಯ ವಿಧ್ಯಾರ್ಥಿಗಳು, ಪೋಷಕರು, ಎಸ್ಡಿಎಂಸಿ ಸದಸ್ಯರು, ಅಧ್ಯಾಪಕ ವೃಂದದವರು ಹಾಜರಿದ್ದರು. ಜಿಪಿಟಿ ಶಿಕ್ಷಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಮೋಹನಾಂಗಿ ಧನ್ಯವಾದಗೈದರು.