ಪುತ್ತೂರು: ಬಲ್ನಾಡು ಉಜ್ರುಪಾದೆ ದ.ಕ.ಜಿ.ಪಂ.ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಹಿರಿಯ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳ ಸಂಘದ, ಎಸ್ ಡಿಎಂಸಿ, ಪೋಷಕರು ಮತ್ತು ದಾನಿಗಳ ಸಹಕಾರದಿಂದ ನೂತನವಾಗಿ ಎಲ್ಕೆಜಿ ಮತ್ತು 1ನೇಯ ಇಂಗ್ಲೀಷ್ ತರಗತಿಗಳನ್ನು ಮೇ 30ರಂದು ಪ್ರಾರಂಭಿಸಲಾಯಿತು. ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿಯವರು ದೀಪಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಇಲಾಖೆಯಿಂದ ನೀಡಿದ ಪಠ್ಯ ಪುಸ್ತಕಗಳು ಮತ್ತು ರವಿಕೃಷ್ಣ ಭಟ್ ಕಲ್ಲಾಜೆಯವರು ನೀಡಿದ ನೋಟ್ ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು ಮೇ.31ರಂದು ಸೇವಾ ನಿವೃತ್ತಿ ಹೊಂದುತ್ತಿರುವ ಶಿಕ್ಷಕಿ ಇಂದಿರಾರವರಿಗೆ ಬೀಳ್ಕೊಡುಗೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಂಸಿ ಅಧ್ಯಕ್ಷ ರಾಧಾಕೃಷ್ಣ ಪೂಜಾರಿ ನಾಗಗದ್ದೆ ವಹಿಸಿದ್ದರು ವೇದಿಕೆಯಲ್ಲಿ ಬಲ್ನಾಡು ಗ್ರಾ.ಪಂ. ಅಧ್ಯಕ್ಷೆ ಪರಮೇಶ್ವರಿ ಭಟ್, ಬಲ್ನಾಡು ಗ್ರಾ.ಪಂ. ಸದಸ್ಯ ಬಾಲಸುಬ್ರಹ್ಮಣ್ಯ ಕೋಟ್ಯಾನ್, ಪುತ್ತೂರು ನಗರಸಭಾ ಸದಸ್ಯೆ ಪೂರ್ಣಿಮಾ ಕೊಡಿಯಡ್ಕ, ಹಿರಿಯ ವಿದ್ಯಾರ್ಥಿ ಮತ್ತು ವಿದ್ಯಾಭಿಮಾನಿಗಳ ಸಂಘದ ಅಧ್ಯಕ್ಷ ನಾರಾಯಣ ಪಾಟಾಳಿ, ಕಾರ್ಯಾಧ್ಯಕ್ಷ ಕುಸುಮಾರಾಜ್, ಕಾರ್ಯದರ್ಶಿ ಉದಯಪ್ರಕಾಶ್ ಬ್ರಹ್ಮರಕೊಡಿ, ಖಜಾಂಚಿ ನಾರಾಯಣ ಗೌಡ ಕುಕ್ಕುತ್ತಡಿ, ಉಪಾಧ್ಯಕ್ಷ ಅಬೂಬಕ್ಕರ್ ಉಜ್ರುಪಾದೆ, ಶಾಲೆಯ ವಿದ್ಯಾಭಿಮಾನಿಗಳಾದ ರವಿಕೃಷ್ಣ ಭಟ್ ಕಲ್ಲಾಜೆ, ಬಲ್ನಾಡು ಗ್ರಾ.ಪಂ. ಮಾಜಿ ಸದಸ್ಯ ನವೀನ್ ಕರ್ಕೇರ, ಬಲ್ನಾಡು ದಂಡನಾಯಕ ಶ್ರೀ ಉಳ್ಳಾಲ್ತಿ ದೈವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಗೌಡ ಕಾಂತಿಲ, ಮುಖ್ಯೋಪಾಧ್ಯಾಯರಾದ ಭವಾನಿ ಎಂ, ಸಹಶಿಕ್ಷಕಿ ಇಂದಿರಾ, ಎಸ್ಡಿಎಂಸಿ ಉಪಾಧ್ಯಕ್ಷೆ ಯಶೋಧ ಕಟ್ಟೆಮನೆ, ಹಿರಿಯ ವಿದ್ಯಾರ್ಥಿ ಮತ್ತು ವಿದ್ಯಾಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಎಸ್ಡಿಎಂಸಿ ಸದಸ್ಯರು, ಪೋಷಕರು, ಮಕ್ಕಳು, ಅಡುಗೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಪಿಟಿ ಶಿಕ್ಷಕ ಹೆಚ್.ಆರ್. ಮಂಜಪ್ಪರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಮುಖ್ಯಶಿಕ್ಷಕರಾದ ಭವಾನಿ ಎಂ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಮತ್ತು ಎಲ್ಲರಿಗೂ ಸಿಹಿತಿಂಡಿ ನೀಡಲಾಯಿತು. ಶಿಕ್ಷಕ ಸಿಬ್ಬಂದಿ ವರ್ಗ ವಿವಿಧ ಕೆಲಸ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.