ಕೊಕ್ಕಡ: ಚಲಿಸುತ್ತಿದ್ದ ಆಟೋದಲ್ಲಿ ಹೃದಯಾಘಾತಕ್ಕೀಡಾಗಿ ಚಾಲಕ ಶರತ್ ಮೃತ್ಯು

0

ಬೆಳ್ತಂಗಡಿ: ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ. (36ವ) ಅವರು ತಮ್ಮ ಅಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜೂ.3ರಂದು ಬೆಳಿಗ್ಗೆ ಸಂಭವಿಸಿದೆ.

ಶರತ್ ಕುಮಾರ್ ಅವರು ಪ್ರತಿದಿನದಂತೆ ಬೆಳಿಗ್ಗೆ ವಿದ್ಯಾರ್ಥಿಗಳನ್ನು ತನ್ನ ರಿಕ್ಷಾದಲ್ಲಿ ಶಾಲೆಗೆ ಬಿಟ್ಟು ಮನೆಗೆ ಮರಳುತ್ತಿದ್ದ ವೇಳೆ ತೀವ್ರ ಹೃದಯಾಘಾತಕ್ಕೊಳಗಾದರು. ತಕ್ಷಣ ಅವರನ್ನು ಸ್ಥಳೀಯರು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ ಅದಾಗಲೇ ಅವರು ನಿಧನರಾಗಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ ರಘುರಾಮ ಮಡಿವಾಳ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here