ಪುತ್ತೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ಇದರ 2025-26ನೇ ಸಾಲಿನ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿ ಕಬಕ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಹೊಸಂಗಡಿ ಹಾಗೂ ಕೋಶಾಧಿಕಾರಿಯಾಗಿ ಇರ್ದೆ-ಉಪ್ಪಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀರವರನ್ನು ಆಯ್ಕೆ ಮಾಡಲಾಗಿದೆ.
ಇತ್ತೀಚೆಗೆ ನಡೆದ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಗೌರವಾಧ್ಯಕ್ಷರಾಗಿ ಬಜತ್ತೂರು ವಳಾಲು ಸರಕಾರಿ ಪ್ರೌಢಶಾಲೆಯ ಎ.ವಿ.ಚಕ್ರಪಾಣಿ, ಹಿರಿಯ ಉಪಾಧ್ಯಕ್ಷರಾಗಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ಪ್ರವೀಣ ರೈ, ಉಪಾಧ್ಯಕ್ಷರುಗಳಾಗಿ ಮುಂಡೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ವನಿತಾ, ದರ್ಬೆ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೊ, ಜತೆ ಕಾರ್ಯದರ್ಶಿಯಾಗಿ ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸಂಘಟನಾ ಕಾರ್ಯದರ್ಶಿಗಳಾಗಿ ಪುತ್ತೂರು ಶಿವರಾಮ ಕಾರಂತ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೀಳಾ, ಕುಡಿಪಾಡಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್, ಉಪ್ಪಿನಂಗಡಿ ಸೈಂಟ್ ಮೇರಿಸ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ, ಕ್ರೀಡಾ ಕಾರ್ಯದರ್ಶಿಯಾಗಿ ಪೆರ್ಲಂಪಾಡಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರಾಜೀವಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕೊಂಬೆಟ್ಟು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಗೀತಾಂಜಲಿ, ಪತ್ರಿಕಾ ಕಾರ್ಯದರ್ಶಿಯಾಗಿ ಪೆರ್ನಾಜೆ ಸೀತಾರಾಘವ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಪಿ., ಹಾಗೂ ಆಂತರಿಕ ಲೆಕ್ಕ ಪರಿಶೋಧಕರಾಗಿ ಶಾಂತಿನಗರ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ನಿರ್ಮಲ ರೊಡ್ರಿಗಸ್ರವರನ್ನು ಆಯ್ಕೆ ಮಾಡಲಾಗಿದೆ.