ಪುತ್ತೂರು: ಇರ್ದೆ-ಉಪ್ಪಳಿಗೆ ಸ.ಹಿ.ಪ್ರಾ ಶಾಲಾ2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಜೂ.2 ನೆರವೇರಿತು.
ವಿದ್ಯಾರ್ಥಿಗಳನ್ನು ಮೆರವಣಿಗೆಯ ಮೂಲಕ ಕರೆತಂದು ಆರತಿ ಬೆಳಗಿ, ಹೂ, ಸಿಹಿ ನೀಡಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಎಸ್ಡಿಎಂಸಿಯ ಅಧ್ಯಕ್ಷ ಲೋಕನಾಥ ಸಿ. ಅಧ್ಯಕ್ಷತೆ ವಹಿಸಿದ್ದರು.
ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ, ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಪುತ್ತೂರಿನ ಸ್ಥಾಪಕ ಡಾ.ಶ್ರೀಶ ಭಟ್, ಎಸ್ಡಿಎಂಸಿ ಉಪಾಧ್ಯಕ್ಷೆ ಯಶೋದ, ದಾನಿಗಳಾದ ಮನೋಜ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ನಿಂದ ನೀಡಲಾದ ಸ್ಕೂಲ್ ಬ್ಯಾಗ್, ಬರೆಯುವ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಹಾಗೂ ಇಲಾಖೆಯಿಂದ ನೀಡಿದ ಉಚಿತ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಮಧ್ಯಾಹ್ನ ಭೋಜನವನ್ನು ಏರ್ಪಡಿಸಲಾಗಿತ್ತು.