ನಿಡ್ಪಳ್ಳಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೂರಂಬೈಲು ಪಾಣಾಜೆ ಇಲ್ಲಿ 2025-26 ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜೂ.2ರಂದು ನಡೆಯಿತು.
ಒಂದನೇ ತರಗತಿಗೆ ದಾಖಲಾದ ಮಕ್ಕಳನ್ನು ಆರತಿ ಬೆಳಗಿ ಬಲೂನು ನೀಡುವ ಮೂಲಕ ಸ್ವಾಗತಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿಎಂಸಿ ಅಧ್ಯಕ್ಷ ಶ್ರೀನಿವಾಸ ಪ್ರಸಾದ್ ವಹಿಸಿದ್ದರು. ಅತಿಥಿಗಳಾಗಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಇದರ ಪ್ರೊಜೆಕ್ಟ್ ಮೆನೇಜರ್ ಹೇಮಂತ್ ಭಾಗವಹಿಸಿ ಶಾಲಾ ಮಕ್ಕಳಿಗೆ ವ್ಯಾಂಟಿವಾ ಕಂಪೆನಿ ಬೆಂಗಳೂರು ಸಹಕಾರದಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ರಿ ಪುತ್ತೂರು ಸಹಭಾಗಿತ್ವದಲ್ಲಿ ನೀಡಲಾದ ಸ್ಕೂಲ್ ಬ್ಯಾಗ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದಿಂದ ನೀಡಿದ ಉಚಿತ ಪಠ್ಯಪುಸ್ತಕಗಳ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಅಂಬಿಕಾ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಊರ್ಮಿಳಾ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರ ನಾಗೇಶ್ ಪಾಟಾಳಿ ಸ್ವಾಗತಿಸಿದರು. ಶಾಲಾ ಪೋಷಕರಾದ ವಸಂತ ಕುರೂಪ್ ಪೋಷಕರ ನೆಲೆಯಲ್ಲಿ ಅನಿಸಿಕೆ ವ್ಯಕ್ತಪಡಿಸಿ ಕೊಡುಗೆ ನೀಡಿದ ಸಂಸ್ಥೆಗೆ ಧನ್ಯವಾದ ಅರ್ಪಿಸಿದರು.
ವಿದ್ಯಾರ್ಥಿಗಳಾದ ವೃಂದಾ, ಕೀರ್ತಿ, ಯಶಸ್ವಿ, ಧನ್ಯಶ್ರೀ ಪ್ರಾರ್ಥಿಸಿದರು. ಗೌರವ ಶಿಕ್ಷಕಿ ವಿದ್ಯಾಲಕ್ಷ್ಮಿ ಧನ್ಯವಾದ ನೀಡಿದರು. ಅತಿಥಿ ಶಿಕ್ಷಕಿ ಸುಪ್ರಿತ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಯಶಸ್ವಿನಿ ಸಹಕರಿಸಿದರು. ಶಾಲಾ ಎಸ್.ಡಿ.ಎಂ.ಸಿ ಸದಸ್ಯರು ಪೋಷಕರು ಭಾಗವಹಿಸಿದ್ದರು.