ವಿಕಸಿತ ಕೃಷಿ ಸಂಕಲ್ಪ ಅಭಿಯಾನ-ಬೆಟ್ಟಂಪಾಡಿ ಹಾ.ಉ.ಸ.ಸಂಘದಲ್ಲಿ ಪೂರ್ವ ಮುಂಗಾರು ಕೃಷಿ ಜಾಗೃತಿ ಅಭಿಯಾನ

0

ಪುತ್ತೂರು: ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ ಮತ್ತು ಭಾರತ ಸರಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ಕರ್ಣಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಗೇರು ಸಂಶೋಧನ ನಿರ್ದೇಶನಾಲಯ, ಪುತ್ತೂರು ಸಹಯೋಗದೊಂದಿಗೆ ಮೇ.29ರಿಂದ ಜೂನ್ 12ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಪ್ರಾರಂಭಿಸಲಾಗಿದ್ದು, ಇದರ ಅಂಗವಾಗಿ ಜೂ.3ರಂದು ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ಪೂರ್ವ ಮುಂಗಾರು ಕೃಷಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ರೈತರಿಗೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಗೇರು ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಲಾಯಿತು. ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಜೆ. ರಮೇಶ್ ಈ ಅಭಿಯಾನದ ಉದ್ದೇಶ ಮತ್ತು ಮಹತ್ವದ ಬಗ್ಗೆ ತಿಳಿಸಿದರು. ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳಾದ ಡಾ. ಭಾಗ್ಯ ಹೆಚ್.ಪಿ. ಮತ್ತು ಡಾ. ಅಶ್ವತಿರವರು ಗೇರು ಬೆಳೆ ತಂತ್ರಜ್ಞಾನಗಳ ಹಾಗೂ ಗೇರು ಮೌಲ್ಯವರ್ಧಿತ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು. ಪಶು ವಿಜ್ಞಾನಿ ಡಾ. ಶಿವಕುಮಾರ್ ಆರ್. ವೈಜ್ಞಾನಿಕ ಪಶುಸಂಗೋಪನೆ ಮತ್ತು ಮೇವಿನ ಬೆಳೆಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ಮಣ್ಣು ಮತ್ತು ನೀರು ಸಂರಕ್ಷಣೆ, ಮಣ್ಣು ಪರೀಕ್ಷೆ ಆಧಾರಿತ ರಸಗೊಬ್ಬರಗಳ ಬಳಕೆ ಕುರಿತು ಮಾಹಿತಿ ನೀಡಿದರು.

ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಮಾತನಾಡಿ ಇಂತಹ ಕಾರ್ಯಕ್ರಮಗಳಿಂದ ರೈತರಿಗೆ ಬಹಳ ಉಪಯೋಗವಾಗುತ್ತದೆ ಎಂದು ತಿಳಿಸಿದರು. ಪ್ರಗತಿಪರ ಕೃಷಿಕ ಹಾಗೂ ಸಂಘದ ಉಪಾಧ್ಯಕ್ಷೆ ಅನಿತಾ ಎಮ್., ನಿರ್ದೇಶಕರಾದ ಶೇಷಪ್ಪ ರೈ ಮೂರ್ಕಾಜೆ, ಪ್ರಭಾಕರ್ ರೈ ಬಾಜುವಳ್ಳಿ, ಕಾರ್ಯದರ್ಶಿ ಸತೀಶ್ ಕುಮಾರ್ ರೈ ಮೂರ್ಕಾಜೆ, ಸಹಾಯಕ ಉಚಿತ್ ಕುಮಾರ್ ಬದಿನಾರು ಸೇರಿದಂತೆ ಸಂಘದ ಸದಸ್ಯರು ಮತ್ತು ರೈತರು ಭಾಗವಹಿಸಿದರು. ಭಾಗವಹಿಸಿದ ರೈತರಿಗೆ ಅಜೋಲಾ ಹಾಗೂ ತರಕಾರಿ ಬೀಜಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here