(ಜೂ.7) ಉಪ್ಪಿನಂಗಡಿ: ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಆಶ್ರಯದಲ್ಲಿ ಶನೈಶ್ಚರ ಪೂಜೆ

0

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಜೂ.7ರಂದು ಸಂಜೆ 3ಕ್ಕೆ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನಡೆಯಲಿದೆ.


ಮಧ್ಯಾಹ್ನ 3ರಿಂದ ಭಜನಾ ಕಾರ್ಯಕ್ರಮ, ಸಂಜೆ 6ರಿಂದ ವೇ.ಮೂ. ಹರೀಶ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶನೈಶ್ಚರ ಪೂಜೆ ಪ್ರಾರಂಭವಾಗಲಿದ್ದು, ರಾತ್ರಿ 7.30ಕ್ಕೆ ಮಹಾಮಂಗಳಾರತಿ ನಡೆಯಲಿದೆ.


ರಾತ್ರಿ 8ಕ್ಕೆ ಸನಾತನ ಹಿಂದೂ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀರಾಮ್ ಭಟ್ ಪಾತಾಳ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದೂ ಪರ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾ. ಬಿಲ್ಲಂಪದವು ಮಹಾಲಿಂಗ ಭಟ್ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೆ. ರಾಧಾಕೃಷ್ಣ ನಾಯ್ಕ್ ಭಾಗವಹಿಸಲಿದ್ದು, ನಟೇಶ್ ಪೂಜಾರಿ, ಸುನೀಲ್ ಕುಮಾರ್ ದಡ್ಡು, ಹೇರಂಭ ಶಾಸ್ತ್ರಿ, ಶಶಿಧರ ಎಂ., ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮಹೇಂದ್ರ ವರ್ಮ ಗೌರವ ಉಪಸ್ಥಿತಿ ಇರಲಿದ್ದಾರೆ. ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here