ಕೆಯ್ಯೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಕಾಲೇಜು ವಿಭಾಗದ ಭೌತಶಾಸ್ತ್ರ ಉಪನ್ಯಾಸಕರಾದ ಕಮಲಾ ಮತ್ತು ಜೀವಶಾಸ್ತ್ರ ಉಪನ್ಯಾಸಕಿ ವತ್ಸಲಾ ಕುಮಾರಿ ಎಂ. ವಯೋನಿವೃತ್ತಿ ಹೊಂದಿದ್ದು, ಅವರ ಬೀಳ್ಕೊಡುಗೆ ಸಮಾರಂಭವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಪ್ರಾಚಾರ್ಯರಾದ ಹಸೀನಾ ಬಾನು ಎಸ್ ಇ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕ ಇಸ್ಮಾಯಿಲ್ ಪಿ. ಅಭಿನಂದನಾ ಭಾಷಣ ಮಾಡಿದರು. ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆ. ಎಸ್., ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಬಾಬು ಎಂ., ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಎ.ಕೆ. ಜಯರಾಮ ರೈ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಹುಸೈನಾರ್ ಸಂತೋಷ್ ನಗರ, ಕಾರ್ಯದರ್ಶಿ ಪ್ರಮಿತ್ ರಾಜ್ ಕಟ್ಟತ್ತಾರು, ಉಪನ್ಯಾಸಕಿ ಗುಣಶೀಲ ಕೆ. ಎನ್., ಶಿಕ್ಷಕರಾದ ಮೋಲಿ ವಿಲ್ಮಾ ಪಿಂಟೊ, ಜೆಸ್ಸಿ ಪಿ. ವಿ., ವಿದ್ಯಾರ್ಥಿಗಳಾದ ಬಿಂಧುಶ್ರೀ, ದೀಕ್ಷಾ ಎಂ. ಡಿ., ಮಹಮ್ಮದ್ ಮಿಕ್ದಾದ್ ಶುಭ ಹಾರೈಸಿದರು. ನಿವೃತ್ತ ಉಪನ್ಯಾಸಕರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರು ತಮ್ಮ ವೃತ್ತಿಜೀವನದ ನೆನಪುಗಳನ್ನು ಹಂಚಿಕೊಂಡರು.
ಅರ್ಥಶಾಸ್ತ್ರ ಉಪನ್ಯಾಸಕಿ ಗುಣಶೀಲ ಕೆ ಎನ್., ರಸಾಯನಶಾಸ್ತ್ರ ಉಪನ್ಯಾಸಕಿ ಅರ್ಚನಾ ರಾವ್ ಎ.ಎಸ್. ಸನ್ಮಾನಪತ್ರ ವಾಚಿಸಿದರು. ನಿವೃತ್ತ ಶಿಕ್ಷಕ ವಿಶ್ವೇಶ್ವರ ಕೆ, ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಶ್ರೀಕೃಷ್ಣ ಭಟ್, ಎಸ್.ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದಿವ್ಯಾ, ಆಶಾಕುಮಾರಿ, ಗಗನಾ ಪಿ., ಜೀವಿತಾ ಕೆ., ನಿರೀಕ್ಷಾ ಎ. ಕೆ. ಪ್ರಾರ್ಥಿಸಿದರು. ಇತಿಹಾಸ ಉಪನ್ಯಾಸಕಿ ಉಮಾಶಂಕರಿ ಎಸ್. ಕೆ. ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಇಂಗ್ಲಿಷ್ ಶಿಕ್ಷಕಿ ಜೆಸ್ಸಿ ಪಿ ವಿ. ವಂದಿಸಿದರು. ಇಂಗ್ಲಿಷ್ ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಕಾರ್ಯಕ್ರಮ ನಿರೂಪಿಸಿದರು.
