ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ನಡೆಯಿತು. ಆರತಿ ಬೆಳಗಿಸಿ, ತಿಲಕವನ್ನಿಟ್ಟು ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು. ದೀಪ ಬೆಳಗಿಸಿ, ಶಾರದಾ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಟ್ರಸ್ಟಿಗಳಾದ ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಸಹ ಆಡಳಿತಾಧಿಕಾರಿ ಹೇಮಾ ನಾಗೇಶ್ ರೈ ಮಾಳ, ಮುಖ್ಯಗುರುಗಳಾದ ನಾರಾಯಣ ಭಟ್, ವಿನಯ ವಿ. ಶೆಟ್ಟಿ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ನಿಕಟ ಪೂರ್ವ ಅಧ್ಯಕ್ಷ ಧನಂಜಯ ಕೇನಾಜೆ ಹಾಗೂ ಪೋಷಕರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.