ಬಡಗನ್ನೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊೖಲ ಬಡಗನ್ನೂರು ಇಲ್ಲಿ ಏಕ್ ಪೇಡ್ ಮಾ ಕೆ ನಾಮ್ ಘೋಷವಾಕ್ಯದಡಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಗ್ರಾ.ಪಂ ಉಪಾಧ್ಯಕ್ಷೆ ಸುಶೀಲಾ ಪಕ್ಯೋಡು ಮಾವಿನ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಪುಷ್ಪಾವತಿ ಎಂ ಬಿ ಸರ್ವರನ್ನೂ ಸ್ವಾಗತಿಸಿ, ಪರಿಸರ ದಿನಾಚರಣೆಯ ಮಹತ್ವದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿಎ ಸಿ ಅಧ್ಯಕ್ಷ ವಸಂತ ಗೌಡ, ಪೋಷಕರಾದ ಜಗದೀಶ್, ನಾರಾಯಣ, ಯಮುನಾ ,ಆಬಿದಾ ಹಾಗೂ ಶಿಕ್ಷಕ ವೃಂದದವರು ಮತ್ತು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.