ನಗರ ಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ – ಪ್ಲಾಸ್ಟಿಕ್ ಬಾಟಲ್ ಸಂಗ್ರಹಣ, ಇ-ತ್ಯಾಜ್ಯ ಸಂಗ್ರಹಣ ಕೇಂದ್ರ, ಗಿಡ ನೆಡುವ ಕಾರ್ಯಕ್ರಮ

0

ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರ ಸಭೆಯಿಂದ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣ, ಇ-ತ್ಯಾಜ್ಯ ಸಂಗ್ರಹಣ ಕೇಂದ್ರ, ಗಿಡ ನೆಡುವ ಕಾರ್ಯಕ್ರಮ, ಬಟ್ಟೆ ಚೀಲ ವಿತರಣೆಯು ಜೂ.5ರಂದು ನಗರ ಸಭಾ ಕಚೇರಿ ಮುಂಭಾಗದಲ್ಲಿ ನಡೆಯಿತು.

ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಪೌರಾಯುಕ್ತ ಮಧು ಎಸ್ ಮನೋಹರ್ ಮಾತನಾಡಿ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರ ಸಭೆಯಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಪ್ಲಾಸ್ಟಿಕ್‌ನ್ನು ಸಂಪೂರ್ಣ ನಿಷೇಧಿಸಿದೆ. ಮುಂದಿನ ಜನಾಂಗವನ್ನು ಬೆಳಸಲು ಪ್ಲಾಸ್ಟಿಕ್ ನಿರ್ಮೂಲನೆ ಆವಶ್ಯಕ. ಇದಕ್ಕಾಗಿ ಸಾರ್ವಜನಿಕರು, ಮಕ್ಕಳಿಗೆ ಹಲವಾರು ಕಾರ್ಯಕ್ರಮಗಳು ಮೂಲಕ ಜಾಗೃತಿ ಮೂಡಿಸಲಾಗಿದೆ. ಇದೀಗ ನಗರ ಸಭಾ ಕಚೇರಿಯ ಬಳಿ ಹೊಸದಾಗಿ ಇ-ತ್ಯಾಜ್ಯ ಘಟಕವನ್ನು ಪ್ರಾರಂಭಿಸಲಾಗಿದ್ದು ಪುತ್ತೂರಿನ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದ ಅವರು, ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ಪ್ಲಾಸ್ಟಿಕ್ ಬಾಟಲಿ ಸಂಗ್ರಹ, ಕೇಂದ್ರ ಸರಕಾರದ ಯೋಜನೆಯಾದ ಪ್ರತಿ ಮಹಿಳೆಗೊಂದು ಮರಕ್ಕೆ ಚಿನ್ನರ ಪಾರ್ಕ್‌ನಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷರಿಂದ ಚಾಲನೆ:
ವಿಶ್ವ ಪರಿಸದರ ದಿನಾಚರಣೆಯ ಅಂಗವಾಗಿ ನಗರ ಸಭೆಯಿಂದ ಪ್ರಾರಂಭಿಸಲಾದ ಪ್ಲಾಸ್ಟಿಕ್ ಬಾಟಲ್ ಸಂಗ್ರಹಣ, ಇ-ತ್ಯಾಜ್ಯ ಸಂಗ್ರಹಣ ಕೇಂದ್ರ, ಗಿಡ ನೆಡುವ ಕಾರ್ಯಕ್ರಮ, ಬಟ್ಟೆ ಚೀಲ ವಿತರಣೆ ಹಾಗೂ ಸ್ವಚ್ಚತೆ ಕಾಪಾಡುವ ಬಗ್ಗೆ ಸಾರ್ವಜನಿಕರು ಜಾಗೃತಿ ಮೂಡಿಸುವ ಕರಪತ್ರಗಳನ್ನು ನಗರ ಸಭೆ ಅಧ್ಯಕ್ಷ ಲೀಲಾವತಿ ಅಣ್ಣು ನಾಯಕ್ ಚಾಲನೆ ನೀಡಿದರು.
ನಗರ ಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಸದಸ್ಯರಾದ ಗೌರಿ ಬನ್ನೂರು, ಪ್ರೇಮಲತಾ ನಂದಿಲ, ಪೂರ್ಣಿಮಾ, ಯೂಸುಫ್ ಡ್ರೀಮ್, ಮನೋಹರ್ ಕಲ್ಲಾರೆ, ನಾಮನಿರ್ದೇಶಿತ ಸದಸ್ಯ ರೋಶನ್ ರೈ ಬನ್ನೂರು, ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾಕಿರಣ್, ನಗರಸಭೆ ಸಹಾಯಕ ಕಾರ್ಯಪಾಲಾಕ ಅಭಿಯಂತರ ಶಬರೀನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಾ|ರಾಜೇಶ್ ಬೆಜ್ಜಂಗಳ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here