ಉಪ್ಪಿನಂಗಡಿ: ಜಾನುವಾರು ಹತ್ಯೆ ನಿಷೇಧ ಕಾನೂನು ಕಟ್ಟುನಿಟ್ಟಿನ ಜಾರಿಗೆ ಮನವಿ

0

ಉಪ್ಪಿನಂಗಡಿ: ರಾಜ್ಯ ಹಾಗೂ ದೇಶದ ಕಾನೂನಿನ ಅನ್ವಯ ಹಾಗೂ ಸುಪ್ರೀಂ ಕೋರ್ಟ್ ಆದೇಶದನ್ವಯ ಮುಂಬರುವ ಹಬ್ಬಗಳ ಕಾರಣಕ್ಕೆ ಜಾನುವಾರುಗಳ ಹತ್ಯೆ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಕಾರ್ಯಗತಗೊಳಿಸಬೇಕೆಂದು ಕಾನೂನಿನ ಸೆಕ್ಷನ್ ಉಲ್ಲೇಖಿಸಿ ಪೊಲೀಸ್ ಇಲಾಖೆಗೆ ವಿಶ್ವಹಿಂದೂ ಪರಿಷತ್ – ಬಜರಂಗದಳ ಉಪ್ಪಿನಂಗಡಿ ಪ್ರಖಂಡದ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.


ಸಂಘಟನೆಯ ಪ್ರಮುಖರಾದ ರವಿನಂದನ್ ಹೆಗ್ಡೆ, ರಾಜಶೇಖರ್ ಶೆಟ್ಟಿ ಕರಾಯ, ಮಹೇಶ್ ಬಜತ್ತೂರು, ಹರೀಶ್ ಶೆಟ್ಟಿ ಮೊದಲಾದ ಪ್ರಮುಖ ಕಾರ್ಯಕರ್ತರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನು ಹಸ್ತಾಂತರಿಸಿದರು. ಜಾನುವಾರುಗಳ ಅಕ್ರಮ ಸಾಗಾಟ ಮತ್ತು ವಧೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಕರ್ತರು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲಿದ್ದಾರೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here