ಪುತ್ತೂರು: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಗೇರು ಸಂಶೋಧನ ನಿರ್ದೇಶನಾಲಾಯ, ಪುತ್ತೂರು ಸಹಯೋಗದೊಂದಿಗೆ ಜೂ.5ರಂದು ಸೋಮೇಶ್ವರ ಪುರಸಭೆಯಲ್ಲಿ ಹಮ್ಮಿಕೊಳ್ಳಲಾಯಿತು.

ಭತ್ತದ ಬೆಳೆಯ ಬೀಜೋಪಚಾರದ ಪದ್ಧತಿ ಪ್ರಾತ್ಯಕ್ಷಿಕೆ, ಮಣ್ಣು ಪರೀಕ್ಷೆಯ ಮಹತ್ವ ಹಾಗೂ ಮಣ್ಣು ಆರೋಗ್ಯ ಚೀಟಿಯ ಪ್ರಯೋಜನ, ಗೇರು ಕೃಷಿಯ ಮಾಹಿತಿ ಮತ್ತು ವಿಶ್ವ ಪರಿಸರ ದಿನದ ಮಹತ್ವವನ್ನು ಗೇರು ಹಣ್ಣಿನ ಗಿಡ ನೆಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು. ಪುರಸಭೆಯ ಮುಖ್ಯಾಧಿಕಾರಿ ಮರ್ಥಾಡಿ, ಸಹಾಯಕ ಕೃಷಿ ನಿರ್ದೇಶಕಿ ವೀಣಾ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ. ಜೆ. ರಮೇಶ, ಗೇರು ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ. ಅಶ್ವತಿ, ಕೆವಿಕೆಯ ಪಶು ವಿಜ್ಞಾನಿ ಡಾ. ಶಿವಕುಮಾರ ಆರ್, ಮಣ್ಣು ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್. ಪುರಸಭೆ ಪದಾಧಿಕಾರಿಗಳು, ಸಿಬ್ಬಂದಿಗಳು, ಸೋಮೇಶ್ವರದ ಗ್ರಾಮಸ್ಥರು, ರೈತರು ಮತ್ತು ರೈತ ಮಹಿಳೆಯರು ಭಾಗವಹಿಸಿದ್ದರು.