ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ, ಬಿಜಿಎಸ್ ಇಕೋ ಕ್ಲಬ್ ಉದ್ಘಾಟನೆ

0

ಉಪ್ಪಿನಂಗಡಿ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಇವರ ವತಿಯಿಂದ ನಡೆಸಲ್ಪಡುತ್ತಿರುವ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ, ಉಪ್ಪಿನಂಗಡಿ ಇಲ್ಲಿ ಪರಿಸರ ದಿನಾಚರಣೆಯೊಂದಿಗೆ ಬಿಜಿಎಸ್ ಇಕೋ ಕ್ಲಬ್ ಉದ್ಘಾಟನೆ ನಡೆಯಿತು.


ಶಾಲಾ ಅಭಿವೃದ್ಧಿ ಸಮಿತಿ ಸದಸ್ಯ ದೇರಣ್ಣ ಗೌಡ ಓಮಂದೂರು ಅವರು ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ. ನಮ್ಮ ಸುತ್ತಮುತ್ತಲು ಗಿಡ ನೆಡುವುದರೊಂದಿಗೆ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಪರಿಸರದ ಮಹತ್ವವನ್ನು ತಿಳಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಶೈಕ್ಷಣಿಕ ಸಲಹೆಗಾರ ರಾಮಚಂದ್ರ ಗೌಡರವರು ವಿದ್ಯಾರ್ಥಿಗಳಿಗೆ ಪರಿಸರದ ಕುರಿತಂತೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪರಿವೀಕ್ಷಕರಾದ ಬಾಲಕೃಷ್ಣ ಗೌಡ ಬಿ.ಟಿ.ಅವರು ಪ್ರಕೃತಿ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ದಿಕ್ಸೂಚಿ ಮಾತುಗಳನ್ನಾಡಿದರು. ಸಂಸ್ಥೆಯ ಹಿತೈಷಿ, ಬೆಂಗಳೂರಿನ ಉದ್ಯಮಿ ನಟೇಶ್ ಪೂಜಾರಿಯವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕಗಳನ್ನು ಹಾಗೂ ಸಿಹಿ ತಿಂಡಿ ವಿತರಿಸಲಾಯಿತು. ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಘೋಷವಾಕ್ಯಗಳೊಂದಿಗೆ ಮೆರವಣಿಗೆಯಲ್ಲಿ ಭಾಗಿಯಾದರು.


ಮುಖ್ಯಶಿಕ್ಷಕಿ ಲಕ್ಷ್ಮಿ ಪಿ., ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕನ್ನಡ ಶಿಕ್ಷಕಿ ನಿತ್ಯಾ ಬಿ.ವಂದಿಸಿದರು. ಶಿಕ್ಷಕರಾದ ಶಕುಂತಲಾ ಕೆ., ಮೋಹನ್ ಹೆಚ್. ಭವ್ಯ ವೈ, ಡೊಂಬಯ ಗೌಡ ಸಹಕರಿಸಿದರು. ವಿಜ್ಞಾನ ಶಿಕ್ಷಕಿ ಸವಿತಾ ಪಿ.ಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here