ಬಡಗನ್ನೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗನ್ನೂರು ಇಲ್ಲಿ “ಸಹ್ಯಾದ್ರಿ ಇಕೋ ಕ್ಲಬ್ ” ವತಿಯಿಂದ “ಏಕ್ ಪೇಡ್ ಮಾ ಕೆ ನಾಮ್” ಘೋಷವಾಕ್ಯದಡಿ ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ನಾರಾಯಣ ರೈ ಕುದ್ಕಾಡಿಯವರು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ಪಳ್ಳತ್ತಾರು, ಕೋಶಾಧಿಕಾರಿ ಸುಬ್ರಾಯ ನಾಯಕ್, ರಾಜೇಶ್ ರೈ ಮೇಗಿನ ಮನೆ, ಗಿರೀಶ್ ಗೌಡ ಕನ್ನಯ ಹಾಗೂ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೖಂದದವರು ಉಪಸ್ಥಿತರಿದ್ದರು.
ಶಾಲಾ ಪ್ರಭಾರ ಮುಖ್ಯ ಗುರುಗಳಾದ ಹರಿಣಾಕ್ಷಿ ಎ ಸ್ವಾಗತಿಸಿದರು. ಸಹ ಶಿಕ್ಷಕಿ ವಿಜಯಲಕ್ಷ್ಮಿ ವಂದಿಸಿದರು