ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರದಲ್ಲಿ ವಿಶ್ವ ಪರಿಸರ ದಿನ ಆಚರಣೆ

0

ನರಿಮೊಗರು : ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಪುರುಷರಕಟ್ಟೆ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪರಿಸರ ದಿನಾಚರಣೆಯ ಪ್ರತಿಜ್ಞೆ ಸ್ವೀಕರಿಸಿದರು.ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಯಿತು. 

ಶಿಕ್ಷಕಿ ಅಂಜಲಿ ದೇರಾಜೆ ಇವರು ಪರಿಸರ ಮಾಲಿನ್ಯ ತಡೆಗಟ್ಟುವುದು, ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡುವುದು, ಮರಗಳನ್ನು ಬೆಳೆಸಿ ಮುಂದಿನ ಪೀಳಿಗೆಗೆ ಶುದ್ಧ ಪರಿಸರವನ್ನು ಉಳಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತಾರವಾಗಿ ತಿಳಿಸಿದರು. ವಿದ್ಯಾರ್ಥಿಗಳ ಪರವಾಗಿ 10ನೇ ತರಗತಿಯ ಮೋಕ್ಷಿತ್ ವಿ. ಬಿ. ಮಾತನಾಡಿದರು. ಶಾಲಾ ಸಂಚಾಲಕರಾದ ಅವಿನಾಶ್ ಕೊಡಂಕಿರಿ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. 

ವಿಶೇಷ ಕಾರ್ಯಕ್ರಮವಾಗಿ ಔಷಧೀಯ ಸಸ್ಯಗಳ ಎಲೆ, ಪರಿಮಳಗಳ ಮೂಲಕ ಗಿಡ ಪರಿಚಯ ವಿದ್ಯಾರ್ಥಿಗಳಿಗೆ ನಡೆಸಲಾಯಿತು.ಮುಖ್ಯಗುರು  ಅಖಿಲಾ ಹಾಗೂ ಶಿಕ್ಷಣ ಸಂಯೋಜಕರಾದ ಶ್ರೀಲಕ್ಷ್ಮೀ ಮೊಳೆಯಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ  ಸುಧಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here