ಕಾಂಚನ ಪ್ರೌಢಶಾಲೆಯಲ್ಲಿ ಅದ್ದೂರಿ ಪ್ರಾರಂಭೋತ್ಸವ

0

ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗೊಳಪಟ್ಟ ಕಾಂಚನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮೆರವಣಿಗೆ ಮೂಲಕ ಶಾಲೆಗೆ ಬರಮಾಡಿಕೊಂಡು ಆರತಿಯನ್ನು ಎತ್ತಿ ತಿಲಕವನ್ನು ಇಟ್ಟು ಸ್ವಾಗತಿಸಲಾಯಿತು.


ಮುಖ್ಯ ಅತಿಥಿಯಾಗಿದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಕವಿತಾ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಮೊಬೈಲ್‌ಗೆ ಹೊಸ ಲಿಂಕ್ ಬಂದಾಗ ಅದನ್ನು ಒತ್ತಿ ಹಣ ಕಳೆದುಕೊಳ್ಳುವ ಬಗ್ಗೆ, ಮಕ್ಕಳ ಸಹಾಯವಾಣಿ ೧೦೯೮, ಮಹಿಳೆಯರಿಗೆ ತೊಂದರೆ ಉಂಟಾದಾಗ ೧೦೯೧, ಮನೆಯ ಪರಿಸರದಲ್ಲಿ ಯಾವುದೇ ರೀತಿಯ ಅನೈತಿಕ ಚಟುವಟಿಕೆಗಳು ನಡೆದಾಗ ಪೊಲೀಸರಿಗೆ ದೂರು ನೀಡಿ ಎಂಬ ಮಾಹಿತಿಯನ್ನು ನೀಡಿದರು.


ವಿದ್ಯಾಭಿಮಾನಿ ಶಿವರಾಮ ಕಾರಂತರು ಈ ವರ್ಷದ ವಿದ್ಯಾರ್ಥಿಗಳ ದಾಖಲಾತಿಯನ್ನು ಪ್ರಶಂಸಿ, ಶಾಲೆಯ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪಾಲ್ಗೊಳ್ಳುವಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಶಿಕ್ಷಕ ರಮೇಶ್ ಮಯ್ಯರವರು ಶೈಕ್ಷಣಿಕ ವರ್ಷದ ರೂಪರೇಷೆಗಳು, ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ನೀಡುವ ಸೌಲಭ್ಯಗಳು, ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರತರಬೇಕು ಎಂದು ಮಾರ್ಗದರ್ಶನ ನೀಡಿದರು. ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಷ್ಟ್ರಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಸಾಧನೆಯನ್ನು ಸ್ಮರಿಸಿದರು.


ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ನಯನ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಹೆಡ್ ಕಾನ್ಸ್‌ಸ್ಟೇಬಲ್ ದೇನಿಕ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಜಯಲಕ್ಷ್ಮಿ ನಿರೂಪಿಸಿದರು.

ಪುಸ್ತಕ ವಿತರಣೆ:
ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ನೀಡಿದ ಉಚಿತ ಬರೆಯುವ ಪುಸ್ತಕ ಹಾಗೂ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿತರಿಸಲಾಯಿತು. ೨೦೨೪-೨೫ರಲ್ಲಿ ವಿಶೇಷ ಸಾಧನೆ ಮಾಡಿದಂತಹ ರಾಷ್ಟ್ರಮಟ್ಟದ ಬಾಲಕಿಯರ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಪಡೆದ ಕೀರ್ತನ ಹೆಚ್ ಮತ್ತು ರಾಷ್ಟ್ರಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಕ್ವಾಟರ್ ಫೈನಲ್ ತನಕ ಉತ್ತಮ ಪ್ರದರ್ಶನ ನೀಡಿದ ರಶ್ಮಿತ್ ಮತ್ತು ಸಿಂಚನ್‌ರವರನ್ನು ಹಾಗೂ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರಣವಿ, ಮೋಕ್ಷಿ ತ್ ಇವರನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here