ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

0

ಪುತ್ತೂರು: ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆ ಜೂ.5ರಂದು ನಡೆಸಲಾಯಿತು.

ಉಪವಲಯ ಅರಣ್ಯ ಅಧಿಕಾರಿ ಮದನ್ ಬಿ.ಕೆ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆ ಸಂಚಾಲಕ ವಿಘ್ನೇಶ್ ಹಿರಣ್ಯ ದೀಪ ಪ್ರಜ್ವಲನೆ ಮಾಡಿ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.


ಪ್ರತಿಭಾ ಪ್ರೌಢಶಾಲಾ ಮುಖ್ಯ ಗುರು ಸುಮನಾ.ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಮಾಜಿ ಅಧ್ಯಕ್ಷರಾದ ರೇಖಾ ನಾಗರಾಜ್, ಪ್ರತಿಭಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಕೇಶವ ಪ್ರಸಾದ್, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ರಾಜಗೋಪಾಲ ಎನ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಪ್ಲಾಸ್ಟಿಕ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕಿ ನವ್ಯಶ್ರೀ ಸ್ವಾಗತಿಸಿ, ಮಮತಾ ಪಿ ವಂದಿಸಿದರು. ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕಿ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರು ಪ್ರತಿಭಾ ಪ್ರೌಢಶಾಲೆಯ ಶಿಕ್ಷಕರು ವಿವಿಧ ಕಾರ್ಯಕ್ರಮವನ್ನು ನಿರ್ವಹಿಸಿದರು. ಕೆ.ರಾಮಚಂದ್ರಪ್ಪ ಮತ್ತು ವಿಶ್ವನಾಥ. ಬಿ. ಸಹಕರಿಸಿದರು.

LEAVE A REPLY

Please enter your comment!
Please enter your name here