ನೆಲ್ಯಾಡಿ: ಪುಚ್ಚೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಕಾಲ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ ಮೇ.31ರಂದು ನಿವೃತ್ತರಾದ ಪದ್ಮನಾಭ ಪಿ.ಅವರಿಗೆ ಶಾಲಾ ಪೂರ್ವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜೂ.7ರಂದು ಬೆಳಿಗ್ಗೆ 10ಕ್ಕೆ ಶಾಲಾ ರಂಗಮಂದಿರದಲ್ಲಿ ನಡೆಯಲಿದೆ.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಭಿನಂದಿಸಲಿದ್ದಾರೆ. ಬೀಳ್ಕೊಡುಗೆ ಸಮಾರಂಭ ಸಮಿತಿ ಅಧ್ಯಕ್ಷ ಅಜಿತ್ ಕಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪಿಲವೂರು ದೀಪ ಪ್ರಜ್ವಲಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಸದಸ್ಯ ಆನಂದ ಪಿಲವೂರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡಬ ತಾಲೂಕು ಅಧ್ಯಕ್ಷ ರಾಮಕೃಷ್ಣ ಮಲ್ಲಾರ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಡಬ ತಾಲೂಕು ಅಧ್ಯಕ್ಷ ವಿಮಲ್ಕುಮಾರ್, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಬಿ., ಉದ್ಯಮಿ ಚೇತನ್ ಕುಮಾರ್ ಮಾಪಾಲ, ಕೊಪ್ಪ ಕುಂಬಾರ ಸೇವಾ ಸಂಘದ ಅಧ್ಯಕ್ಷ ವೆಂಕಪ್ಪ ಕುಂಬಾರ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿನ್ ಪಿ.ಜೆ., ಪುಚ್ಚೇರಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮೋಹನ ಪಿ., ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನೆಲ್ಯಾಡಿ ಗ್ರಾ.ಪಂ.ಸದಸ್ಯರಾದ ಚೇತನ, ಶ್ರೀಲತಾ ಸಿ.ಹೆಚ್., ಜಯಂತಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷರಾದ ನೇಮಣ್ಣ ಗೌಡ ಉರ್ಮಾನು, ಗಣೇಶ್ ಪಿ., ಲೋಕಯ್ಯ ಗೌಡ ಪಿಲವೂರು, ಕಮಲಾಕ್ಷ ಬರಮೇಲು ಗೌರವ ಉಪಸ್ಥಿತಿ ಇರಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.