ಪುತ್ತೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪುತ್ತೂರು ದ್ವಾರಕಾ ಕಾರ್ಪೊರೇಶನ್ ಪ್ರೈ ಲಿಮಿಟೆಡ್ ಹಾಗೂ ಪುತ್ತೂರು ನಗರಸಭೆ ಇವರ ಸಹಯೋಗದಲ್ಲಿ “ಏಕ್ ಪೇಡ್ ಮಾ ಕೇ ನಾಮ್” ಎಂಬ ಯೋಜನೆಯಡಿಯಲ್ಲಿ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯಕ್, ಉಪಾಧ್ಯಕ್ಷ ಬಾಲಕೃಷ್ಣ ಕೆಮ್ಮಿಂಜೆ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಹಾಗೂ ದ್ವಾರಕಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಗೋಪಾಲಕೃಷ್ಣ ಭಟ್ ಎ., ಪುರಸಭೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಶಬರಿನಾಥ್ ರೈ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷ ಬಾಲಕೃಷ್ಣ ಕೆಮ್ಮಿಂಜೆ ಮಾತನಾಡಿ, ಇನ್ನು ಮುಂದೆಯೂ ನಗರದ ಹಾಗೂ ಸಮಾಜದ ಬೆಳವಣಿಗೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಯ ಕೊಡುಗೆ ಇರಲಿ ಎಂದು ಹಾರೈಸಿದರು. ಎನ್.ಜಿ. ಒ. ಮ್ಯಾನೇಂಜಿಗ್ ಡೈರೆಕ್ಟರ್ ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್ ಡಾ. ರಾಜೇಶ್ ಬೆಜ್ಜಂಗಳ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.