ಪುತ್ತೂರು: ಕಳೆದ ಹಲವು ವರ್ಷಗಳಿಂದ ಸುಳ್ಯದಲ್ಲಿ ಮಂಗಳ ಮೋಟಾರ್ ಡ್ರೈವಿಂಗ್ ಸ್ಕೂಲ್ ಉದ್ಯಮವನ್ನು ನಡೆಸುತ್ತಿದ್ದು ಅಕಾಲಿಕವಾಗಿ ನಿಧನರಾಗಿದ್ದು ಅವರ ಮನೆಗೆ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಫಾ ಕೆ.ಎಂ ರವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ ಸನ್ಮಿತ್ರ ರಮೇಶ್ ರೈ ಯವರು ಉತ್ತಮ ಸಮಾಜ ಸೇವಕರಾಗಿ ಗುರುತಿಸ ಕೊಂಡಿರುವವರು ಅವರ ಅಕಾಲಿಕ ಅಗಲುವಿಕೆ ತುಂಬಲಾರದ ನಷ್ಟ. ಆಗಲುವಿಕೆಯಿಂದ ಕುಟುಂಬಕ್ಕೆ ಉಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದರು.