ಜೂ 7- ಚಾರ್ವಾಕ ಪ್ರಾ.ಕೃ.ಪ. ಸ. ಸಂಘದ ಶತಮಾನೋತ್ಸವ ಕಾರ್ಯಕ್ರಮದ ಲೆಕ್ಕಪತ್ರ ಮಂಡನೆ ಸಭೆ – ಅಭಿನಂದನಾ ಕಾರ್ಯಕ್ರಮ

0

ಕಾಣಿಯೂರು: ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಲೆಕ್ಕಪತ್ರ ಮಂಡನೆ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮವು ಜೂ 7ರಂದು ಕಾಣಿಯೂರು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡಾ ಕಾಣಿಯೂರು ಶಾಖಾ ವ್ಯವಸ್ಥಾಪಕ ಅತಿಥ್ ರೈ, ಸಾಧಕ ವಿದ್ಯಾರ್ಥಿಗಳಾದ ಹನ್ಸಿಕಾ, ಮಾನ್ವಿ ಜಿ.ಎಸ್, ಶ್ರೀವಿದ್ಯಾ, ಉತ್ತಮ್ ಗುಂಡಿಗದ್ದೆ ಇವರಿಗೆ ಸನ್ಮಾನ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here