ಪುತ್ತೂರು: ಪುತ್ತೂರಿನ ಸುದಾನ ವಸತಿಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿ ಮಿಥುನ್ ಪಿ ಪಿ ಪರಿಸರದ ಮೇಲಾಗುವ ದುಷ್ಪರಿಣಾಮಗಳು, ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ನಮ್ಮ ಜೀವನ ಶೈಲಿಯಲ್ಲಿ ಮಾಡಬೇಕಾದ ಬದಲಾವಣೆಗಳ ಬಗ್ಗೆ ತಿಳಿಸಿದರು. 6ನೇ ತರಗತಿಯ ವಿದ್ಯಾರ್ಥಿನಿ ವೈಷ್ಣವಿ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಿದರು. 9 ನೇ ತರಗತಿಯ ಧೃತಿ ಶೆಟ್ಟಿ ಪರಿಸರ ಗೀತೆಯನ್ನು ಹಾಡಿದರು.
ಶಾಲಾ ಭಿತ್ತಿಪತ್ರಿಕೆಯಲ್ಲಿ ವಿದ್ಯಾರ್ಥಿಗಳು ರಚಿಸಿದ ಚಿತ್ರಕಲೆ, ಬರಹ, ಪೋಸ್ಟರ್ಗಳನ್ನು ಪ್ರದರ್ಶಿಸಲಾಯಿತು. 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ’ಸೆ ನೊ ಟು ಪ್ಲಾಸ್ಟಿಕ್’ ಎಂಬ ವಿಷಯದ ಬಗ್ಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.