ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಇದರ ಅಶ್ರಯದಲ್ಲಿ ಇಲ್ಲಿನ ಶ್ರೀ ಸಹಸ್ರಲಿಂಗೆಶ್ವರ ದೇವಾಲಯದಲ್ಲಿ ಶುಕ್ರವಾರದಂದು ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು.
ದೇವಾಲಯದ ಪರಿಸರದಲ್ಲಿ ಜೂ. 7 ರಂದು ಟ್ರಸ್ಟ್ ವತಿಯಿಂದ ಸಂಕಲ್ಪಿಸಲಾದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ ಯ ಪೂರ್ವಭಾವಿಯಾಗಿ ನಡೆಸಲಾದ ಈ ದೇವಾಲಯ ಸ್ವಚ್ಚತಾ ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರವರ್ಮ, ಪ್ರಮುಖರಾದ ಶ್ರೀರಾಮ್ ಭಟ್ ಪಾತಾಳ, ಚಿದಾನಂದ ಪಂಚೇರು, ಕೈಲಾರು ರಾಜಗೋಪಾಲ ಭಟ್, ಹೇರಂಭ ಶಾಸ್ತ್ರಿ, ಲೊಕೇಶ್ ಬೆತ್ತೋಡಿ, ಸಂದೀಪ್, ಜಯರಾಮ ಆಚಾರ್ಯ ಮೊದಲಾದವರಿದ್ದರು. ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾಕ್, ಸದಸ್ಯರಾದ ವೆಂಕಪ್ಪ ಪೂಜಾರಿ, ಡಾ. ರಮ್ಯ ರಾಜಾರಾಮ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ ಸ್ವಯಂ ಸೇವಕರನ್ನು ಸ್ವಾಗತಿಸಿ, ಟ್ರಸ್ಟ್ನ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು. ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿ ಪದ್ಮನಾಭ ಕುಲಾಲ್, ದಿವಾಕರ ಗೌಡ, ಸುಧಾಕರ ಶೆಟ್ಟಿ ಸಹಕರಿಸಿದರು.