ಪುತ್ತೂರು: ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ಭಾರತೀಯ ಕೃಷಿ ಅನುಸಂಧಾನ ಪರಿಷತ್ (ICAR), ಮೀನುಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯ ಬೀದರ್, ಕೃಷಿ ವಿಜ್ಞಾನ ಕೇಂದ್ರ ದ.ಕ. ಹಾಗೂ ಗೇರು ಸಂಶೋಧನಾ ನಿರ್ದೇಶನಾಲಯ (DCR) ಪುತ್ತೂರು ಇವರ ಸಹಯೋಗದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಜೂ.9 ರಂದು ನಡೆಯಲಿದೆ.
ಕಾರ್ಯಕ್ರಮದಲ್ಲಿ ರೈತ – ವಿಜ್ಞಾನಿ ಸಂವಾದ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಗೇರು ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಪರಿಣಿತ ವಿಜ್ಞಾನಿಗಳು ಕೃಷಿ ವಿಜ್ಞಾನ ತಂತ್ರಜ್ಞಾನದ ಬಗ್ಗೆ ಮಾಹಿತಿ ನೀಡಲಿದ್ದು, ರೈತರು, ಹೈನುಗಾರರು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಯಕ್ರಮವು ತಾಲೂಕು ಕೃಷಿಕ ಸಮಾಜ ಪುತ್ತೂರು, ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಕೆದಂಬಾಡಿ, ಕೆಯ್ಯೂರು, ಅರಿಯಡ್ಕ, ಒಳಮೊಗ್ರು ಗ್ರಾಮ ಸಮಿತಿ ಹಾಗೂ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಸನ್ಯಾಸಿಗುಡ್ಡೆ ಮತ್ತು ಕೆದಂಬಾಡಿ ಇವರ ಸಹಕಾರದಲ್ಲಿ ನಡೆಯಲಿದೆ ಎಂದು ಸಂಘಟಕರಾದ ಕಡಮಜಲು ಸುಭಾಸ್ ರೈ ತಿಳಿಸಿದ್ದಾರೆ.