ಜೂ.8 : ಸವಣೂರಿನಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 27ನೇ ಶಾಖೆ ಉದ್ಘಾಟನೆ

0

ಪುತ್ತೂರು: ಮಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಇದರ 27ನೇ ಶಾಖೆಯು ಸವಣೂರಿನ ಸಿಂಧೂರ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿ ಜೂ.8 ರಂದು ಉದ್ಘಾಟನೆಗೊಳ್ಳಲಿದೆ.

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ನಿರ್ದೇಶಕರಾದ ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈಯವರು ಉದ್ಘಾಟನೆ ನೇರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಅಧ್ಯಕ್ಷ ಕೆ‌. ಜೈರಾಜ್ ಬಿ.ರೈರವರು ವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಶ್ರೀ ರಾಮಕೃಷ್ಣ ಸೊಸೈಟಿಯ ನಿರ್ದೇಶಕರುಗಳಾದ ವಿಠಲ ಪಿ.ಶೆಟ್ಟಿ, ಪಿ.ಬಿ.ದಿವಾಕರ್ ರೈ, ಕುಂಬ್ರ ದಯಾಕರ್ ಆಳ್ವ, ಡಾ.ಬಿ.ಸಂಜೀವ ರೈರವರುಗಳು ಭಾಗವಹಿಸಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸೊಸೈಟಿಯ ಉಪಾಧ್ಯಕ್ಷರಾದ ಲಕ್ಷ್ಮಿ ಜಯಪಾಲ ಶೆಟ್ಟಿ, ಮಹಾಪ್ರಬಂಧಕ ಗಣೇಶ್ ಜಿ.ಕೆ ಹಾಗೂ ಸವಣೂರು ಶಾಖೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ರಾಧಿಕಾ ರೈರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here