ತಿಂಗಳಾಡಿ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನ

0

ಪುತ್ತೂರು:ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ ) ಇದರ ಪ್ರಥಮ ವರ್ಷದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ತಿಂಗಳಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ವಿಶ್ವ ಪರಿಸರ ದಿನದ” ಪ್ರಯುಕ್ತ “ಪರಿಸರ ಪರ್ವ” ಎಂಬ ಕಾರ್ಯಕ್ರಮ ಜೂ.5ರಂದು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆದಂಬಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ವಹಿಸಿ, ಪ್ರಕೃತಿ ಸಂರಕ್ಷಣೆಗಾಗಿ ಪಂಚಾಯತ್ ವತಿಯಿಂದ ನಡೆಸಲ್ಪಡುವ ವಿವಿಧ ರೀತಿಯ ಚಟುವಟಿಕೆಗಳ ಕುರಿತು ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಕೆಯ್ಯೂರು ಇಲ್ಲಿನ ಆಂಗ್ಲ ಭಾಷಾ ಶಿಕ್ಷಕಿ ಜೆಸ್ಸಿ ಪಿ.ವಿ ಉಪಸ್ಥಿತರಿದ್ದರು. ತಿಂಗಳಾಡಿ ಶಾಲೆಯ ಶಿಕ್ಷಕಿ ರೇವತಿ ಹಾಗೂ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಹಮೀದ್ .ಟಿ ಮತ್ತು ಕೆದಂಬಾಡಿ ಗ್ರಾಮ ಪಂಚಾಯತ್ ಗ್ರಂಥಾಲಯದ ಮೇಲ್ವಿಚಾರಕ ಸಾರಿಕಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. “ಪರಿಸರ ಪರ್ವ” ಕಾರ್ಯಕ್ರಮದ ಭಾಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸ್ನೇಹ ರೋಸ್ ಜೇಕಬ್ ಅತಿಥಿಗಳನ್ನು ಸ್ವಾಗತಿಸಿದರು.ಪೂಜಾ ಎಂ. ಕಾರ್ಯಕ್ರಮವನ್ನು ನಿರೂಪಿಸಿದರು. ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರದಲ್ಲಿ ಗಿಡಗಳನ್ನು ನೆಟ್ಟರು.

LEAVE A REPLY

Please enter your comment!
Please enter your name here