ಪುತ್ತೂರು: ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್ ,ಬುಲ್ ಬುಲ್ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.
ವಿದ್ಯಾರ್ಥಿಗಳು ತಾವು ತಯಾರಿಸಿದ ಬೀಜದುಂಡೆಗಳನ್ನು ಅರಣ್ಯ ಪ್ರದೇಶಕ್ಕೆ ಎಸೆಯುವ ಮೂಲಕ ಪರಿಸರ ಸ್ನೇಹಿ ಕಾರ್ಯದ ಮಹತ್ವವನ್ನು ಅರಿತುಕೊಂಡರು. ಬಳಿಕ ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರಸನ್ನ ಕೆ ಗಿಡಗಳನ್ನು ನೆಡುವ ಮೂಲಕ ವಿದ್ಯಾರ್ಥಿಗಳಿಗೆ ಮರಗಿಡಗಳನ್ನು ಬೆಳೆಸಲು ಪ್ರೇರಣೆಯನ್ನು ನೀಡಿದರು.

ಕಾರ್ಯಕ್ರಮಕ್ಕೆ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸ್ಥೆಯ ಸ್ಕೌಟ್ಸ್ ,ಗೈಡ್ಸ್, ಕಬ್ ,ಬುಲ್ ಬುಲ್ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ,ಸಹಕರಿಸಿದರು.