ಭಕ್ತಕೋಡಿ: ಗೌರಿ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಬ್ಯಾಗ್ ಮತ್ತು ಪುಸ್ತಕಗಳ ವಿತರಣೆ

0


ಭಕ್ತ ಕೋಡಿ : ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆಯನ್ನು ಆರಂಭಿಸಿ ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಗೌರಿ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್,ನೋಟ್ ಪುಸ್ತಕ ಹಾಗೂ ಕಂಪಾಸ್ ಗಳನ್ನು ಒಳಗೊಂಡ ಕಿಟ್ ಅನ್ನು ಜೂ.6 ರಂದು ವಿತರಿಸಲಾಯಿತು.


ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಪುಸ್ತಕಗಳನ್ನು ವಿತರಿಸಿದ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಪ್ರಾಜೆಕ್ಟ್ ಮ್ಯಾನೇಜರ್ ಆದ ಹೇಮಂತ್ ರವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾದ ಗುರಿಯನ್ನು ಇಟ್ಟುಕೊಂಡು ಸಂಸ್ಕಾರಯುತ ಶಿಕ್ಷಣವನ್ನು ಪಡೆಯಬೇಕಾಗಿ ಶುಭ ಹಾರೈಸಿದರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ. ಸೀತಾರಾಮ ಭಟ್ ಕಲ್ಲಮರವರು ಮಾತನಾಡಿ, ಶಾಲೆಯ ಸಂಸ್ಥಾಪಕರಾದ ವಿಜಯ್ ಕುಮಾರ್ ರವರು ಸರಳ ಸಜ್ಜನ ವ್ಯಕ್ತಿಯಾಗಿದ್ದು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯ ಬಗ್ಗೆ ಕೊಂಡಾಡಿದರು. ಅಂತಹ ಸಂಸ್ಥಾಪಕರ ದಿನದಂದು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ನವರು ಶಾಲಾ ವಿದ್ಯಾರ್ಥಿಗಳಿಗೆ ನೀಡಿದ ಸಹಾಯ ಶ್ಲಾಘನೀಯ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ 2024- 25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ 14 ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು ತಮ್ಮ ವ್ಯಯುಕ್ತಿಕ ನೆಲೆಯಲ್ಲಿ ಪ್ರೋತ್ಸಾಹ ಧನ ವಿತರಿಸಿದರು. ಹಾಗೂ 2025-26ನೇ ಸಾಲಿನ ರಕ್ಷಕ ಶಿಕ್ಷಕ ಸಂಘ ರಚನೆ ಮಾಡಿದ್ದು,ಅಧ್ಯಕ್ಷರಾಗಿ ಮೋನಪ್ಪ ಮತ್ತು ಉಪಾಧ್ಯಕ್ಷರಾಗಿ ರುಬಿನಾರವರು ಆಯ್ಕೆಗೊಂಡರು.
ಕಾರ್ಯಕ್ರಮದ ಅಧ್ಯಕ್ಷೀಯ ಸ್ಥಾನವನ್ನು ಶಾಲೆಯ ಸಂಚಾಲಕರಾದ ಡಾ ಯಾದವಿ ಜಯಕುಮಾರ್ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಜಯಕುಮಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಜಯಂತ್ ಬೇಕಲ್, ಶಶಿಧರ್ ಎಸ್. ಡಿ, ಮಹಾಬಲ ರೈ ,ನಿಕಟ ಪೂರ್ವ ಮೇಲುಸ್ತುವಾರಿ ಸದಸ್ಯರು,ಶಾಲಾ ಮುಖ್ಯ ಗುರುಗಳು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಸುಜಾತಾ ರವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ರಕ್ಷಿತಾ ರೈ ರವರು ವಂದಿಸಿದರು. ಶಾಲಾ ಶಿಕ್ಷಕರಾದ ವಿಜಯಕುಮಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here