ಪುತ್ತೂರು: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 2025-26 ನೇ ಸಾಲಿನ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಕಾಳುಮೆಣಸು, ಕೊಕೋ, ಗೇರು ಮತ್ತು ರಾಂಬೂಟನ್, ಡ್ರಾಗನ್, ಕಾಳುಮೆಣಸು ಪುನಶ್ಚೇತನ ಹಾಗೂ ನೀರು ಸಂಗ್ರಹಣಾ ಘಟಕ, ಸಮಗ್ರ ಪೋಷಕಾಂಶ ನಿರ್ವಹಣೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. ಆಸಕ್ತ ರೈತರು ದಾಖಲಾತಿಯೊಂದಿಗೆ ಇಲಾಖೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆ, ಪಹಣಿ ಪತ್ರ (RTC) ಪ್ರತಿ, ಪಹಣಿ ಪತ್ರ (RTC) ದಲ್ಲಿ ಬೆಳೆ ದಾಖಲಾತಿಯಾಗದ ಪಕ್ಷದಲ್ಲಿ ಬೆಳೆ ದೃಢೀಕರಣ ಪತ್ರ, ರಾಷ್ಟ್ರೀಕೃತ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಬ್ಯಾಂಕ್ ಖಾತೆಗೆ NPCI ಮತ್ತು ಆಧಾರ ಜೋಡಣೆ ಆಗಿರುವುದನ್ನು ಖಾತರಿ ಪಡಿಸಿಕೊಂಡು ಲಗತ್ತೀಕರಿಸುವುದು), ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಪರಿಶಿಷ್ಟ ವರ್ಗ/ ಪರಿಶಿಷ್ಟ ಪಂಗಡದ ಫಲಾನುಭವಿಗಳಾದಲ್ಲಿ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ ತೋಟಗಾರಿಕೆ ಇಲಾಖೆಯ ದೂರವಾಣಿ ಸಂಖ್ಯೆ: 08251-230905 , ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: (9731854527), ಸಹಾಯಕ ತೋಟಗಾರಿಕೆ ನಿರ್ದೇಶಕರು: (9449526117) ಇವರನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.