ಪುತ್ತೂರು: ಕೆದಿಲ ಗ್ರಾಮದ ಗಾಂಧಿನಗರದಲ್ಲಿ ಚಲಿಸುತ್ತಿದ್ದ ಕಾರನ್ನು ನಿಲ್ಲಿಸಿ ಹಲ್ಲೆ ನಡೆಸಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಕೆದಿಲ ಗ್ರಾಮದ ಸರೋಳಿ ನಿವಾಸಿ ಅಬೂಬಕ್ಕರ್ ರಾಶಿಕ್ (28ವ)ರವರು ಹಲ್ಲೆಗೊಳಗಾದವರು. ಅವರು ತನ್ನ ಕಾರಿನಲ್ಲಿ ಮಾರಿಪಳ್ಳ ಎಂಬಲ್ಲಿಗೆ ಹೋಗಿ ಬರುತ್ತಿದ್ದ ಸಂದರ್ಭ ಕೆದಿಲ ಗ್ರಾಮದ ಗಾಂಧಿನಗರದಲ್ಲಿ ಶಾಫಿ ಗಡಿಯಾರ ಮತ್ತು ಜೆಸಿಬಿ ಸಿದ್ದಿಕ್ ಎಂಬವರು ಕಾರನ್ನು ತಡೆದ ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು ಅಬೂಬಕ್ಕರ್ ರಾತಿಕ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.