ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರವು ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚ ಶ್ರೀಯಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಮಂಗಳೂರು ಇದರ ಮುಖ್ಯಸ್ಥರಾದ ಶ್ರೀಶ ಕೆ.ಎಂ. ರವರು ಆಗಮಿಸಿ ಸಿಬ್ಬಂದಿಗಳಿಗೆ “People Skill Development Program” ಕುರಿತು ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.

ಬ್ಯಾಂಕ್ ನ ಅಧ್ಯಕ್ಷರಾದ ಹೆಚ್.ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷರಾದ ಮನೋರಂಜನ್ ಕೆ.ಆರ್, ನಿರ್ದೇಶಕರಾದ ದಯಾನಂದ ಆಳ್ವ ಕೆ, ಮೋಹನ್ ಕೆ.ಎಸ್. ಭಾಸ್ಕರ್ ಶೆಟ್ಟಿ, ದಿವಾಕರ ವಿ, ಸತೀಶ ಪಿ, ಪೂವಪ್ಪ ಎಸ್, ಶುಭಲಕ್ಷ್ಮಿ, ಜಯಂತಿ ಎಚ್.ರಾವ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮುರಳಿ ಶ್ಯಾಮ್ ಕೆ. ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶ್ರೀಶ ಕೆ.ಎಂ. ರವರನ್ನು ಬ್ಯಾಂಕಿನ ವತಿಯಿಂದ ಗೌರವಿಸಲಾಯಿತು.