ಕಡಬ: ಬಲ್ಯ ಗ್ರಾಮದ ಪಾಲ್ತಿಮಾರ್ ಶ್ರೀ ಮೂಕಾಂಬಿಕಾ ಅಮ್ಮನವರ ದೇವಸ್ಥಾನ ದಲ್ಲಿ ಕ್ಷೇತ್ರದ ದೈವಸ್ಥಾನದ ಜೀರ್ಣೋದ್ಧಾರ ಬಗ್ಗೆ ಅಷ್ಟಮಂಗಳ ಪ್ರಶ್ನಾ ಚಿಂತನೆ ನಡೆಯಲಿದೆ.
ವೇದಮೂರ್ತಿ ಶ್ರೀ ಅನಂತಷಯನ ಸೀತಾರಾಮ ಆಚಾರ್ಯ ಇವರ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಕ್ಷೇತ್ರದ ದೈವ ಸಾನಿಧ್ಯಗಳ ಜೀರ್ಣೋದ್ಧಾರ ಬಗ್ಗೆ ಅಷ್ಟಮಂಗಳ ಪ್ರಶ್ನಾ ಚಿಂತನೆ ನಡೆಯಲಿದೆ ಎಂದು ಮೂಕಾಂಬಿಕಾ, ಕುಪ್ಪೆ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿಗಳು ಆಗಿರುವ ಕೇಶವ ಜ್ಯೋತಿಷ್ಯರು ತಿಳಿಸಿದ್ದಾರೆ.