ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ದೂರವಿರೋಣ-ಡಾ. ಶ್ರೀಶ ಭಟ್
ಬೆಟ್ಟಂಪಾಡಿ: ಪ್ರಿಯದರ್ಶಿನಿ ವಿದ್ಯಾಸಂಸ್ಥೆ ವಿದ್ಯಾಗಿರಿ ಬೆಟ್ಟಂಪಾಡಿ ಇಲ್ಲಿ 2025 -26ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರು ಹಾಗೂ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಡಾ. ಶ್ರೀಶ ಭಟ್ ಇವರು ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅತಿಯಾದ ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಆದಷ್ಟು ದೂರವಿರೋಣ. ನಾವು ಜೀವನದಲ್ಲಿ ಶಿಸ್ತು ಮೂಡಿಸಿಕೊಂಡಲ್ಲಿ ಮಕ್ಕಳು ಅನುಸರಿಸುವುದು ಸಹಜ. ಮಕ್ಕಳಲ್ಲಿ ಪದಬಂಧ, ವಾರ್ತಾ ಪತ್ರಿಕೆ ಓದುವ ಹವ್ಯಾಸ ಹಾಗೂ ಮಾತನಾಡುವ ಕೌಶಲ್ಯಗಳನ್ನು ಬೆಳೆಸುವುದಕ್ಕಾಗಿ ಪ್ರೇರಣೆ ನೀಡುವುದು ನಮ್ಮ ಜವಾಬ್ದಾರಿ ಎಂದರು. ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ರೈ ಕಟ್ಟಾವು ಪ್ರಿಯದರ್ಶಿನಿ ಎಂಬ ಈ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಸೋಲಲು ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಇಂಡಿಯನ್ ಟ್ಯಾಲೆಂಟ್ ಒಲಿಂಪಿಯಾಡ್ ನಡೆಸಲ್ಪಡುವ ಪರೀಕ್ಷೆಯಲ್ಲಿ ಎರಡನೇ ಸುತ್ತಿನಲ್ಲಿ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿರುತ್ತಾರೆ ಮತ್ತು ಎಕ್ಸಲೆನ್ಸ್ ಮೆಡಲ್ ಗೆ ಆಯ್ಕೆಯಾಗಿರುವ ಐದು ವಿದ್ಯಾರ್ಥಿಗಳಿಗೆ ಮತ್ತು ಪ್ರಶಸ್ತಿ ಪಡೆದ ಒಟ್ಟು 25 ಮಂದಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಶಾಲಾ ಮುಖ್ಯ ಗುರು ರಾಜೇಶ್ ನೆಲ್ಲಿತಡ್ಕ ಇವರಿಗೆ ಇಂಡಿಯನ್ ಟ್ಯಾಲೆಂಟ್ ಒಲಂಪಿಯಾಡ್ ಸಂಸ್ಥೆಯು ಕೊಡಲ್ಪಡುವ ಬೆಸ್ಟ್ ಪ್ರಿನ್ಸಿಪಾಲ್ ಅವಾರ್ಡ್ ಗೆ ಭಾಜನರಾಗಿರುವುದು ಹೆಮ್ಮೆಯ ಸಂಗತಿ. ಹಾಗೂ ಸಂಧ್ಯಾ ವಿ, ಸಂಧ್ಯಾ ಕುಮಾರಿ, ದೀಕ್ಷಿತ, ರಂಜಿತ್ ಕೆ.ಎಂ, ಭವ್ಯ ಜಿ, ದಿವ್ಯಪ್ರಭು ಬೆಸ್ಟ್ ಇನ್ಸ್ಪರಿಂಗ್ ಟೀಚರ್ಸ್ ಪ್ರಶಸ್ತಿ ಪಡೆದುಕೊಂಡಿರುತ್ತಾರೆ . ವಿಜೇತ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಸಾಧನೆಗೆ ಆಡಳಿತ ಮಂಡಳಿ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಂಗನಾಥ ರೈ ಗುತ್ತು ಉಪಸ್ಥಿತರಿದ್ದರು
ಸಹ ಶಿಕ್ಷಕಿ ಸಂಧ್ಯಾ ವಿ ಸ್ವಾಗತಿಸಿದರು. ಭಾಗ್ಯಶ್ರೀ ವಂದಿಸಿದರು. ಶರ್ಮಿಳ ಕಾರ್ಯಕ್ರಮ ನಿರೂಪಿಸಿದರು