ಪುತ್ತೂರು: ಕಾರ್ಜಾಲು ಶ್ರೀಕಲ್ಕುಡ-ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಪ್ರತಿವರ್ಷ ಮಂಜಲ್ಪಡ್ಪು ಬಿಇಎಂ ಹಿ.ಪ್ರಾ ಶಾಲೆಯ 1ನೇ ತರಗತಿ ವಿದ್ಯಾರ್ಥಿಗಳಿಗೆ ನೀಡುವ ಪುಸ್ತಕ ಹಾಗೂ ಕಲಿಕೆಗೆ ಪೂರಕವಾದ ಪರಿಕರಗಳ ವಿತರಣೆ ಜೂ.10ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಲ್ಕುಡ-ಕಲ್ಲುರ್ಟಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಜೈನ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ನ ಡಾ.ಶ್ರೀಶ ಭಟ್ ಅಧ್ಯಕ್ಷತೆ ವಹಿಸಿದ್ದರು. ನಗರ ಸಭಾ ಸದಸ್ಯ ದಿನೇಶ್ ಶೇವಿರೆ, ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಚಂದ್ರಶೇಖರ್, ಕೃಷ್ಣಪ್ಪ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಸದಸ್ಯರಾದ ಹೊನ್ನಪ್ಪ ಕಲ್ಲೇಗ, ದಿನೇಶ್ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೂರ್ಣೇಶ್ ಕುಮಾರ್, ನಳಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗುರು ವಿನಾಯಕ ಬಾಳಿಗಾ, ಸುಧಾಕರ ಶೆಣೈ, ಹಿರಿಯ ವಿದ್ಯಾರ್ಥಿಗಳಾದ ವಿನೋದ್, ಧನಂಜಯ ಹಾಗೂ ಗಣಪತಿ ನಾಯಕ್ ವನಸಿರಿ, ಸುಚಿತ್ರಾ ಅಮೃತ್ ನೆಹರುನಗರ ಇವರು ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್ ಹಾಗೂ ಸಮವಸ್ತ್ರಗಳನ್ನು ವಿತರಿಸಿದರು.
ಶಾಲಾ ಮುಖ್ಯಶಿಕ್ಷಕ ಶಿವಾನಂದಪ್ಪ ಸ್ವಾಗತಿಸಿದರು. ಶಿಕ್ಷಕರಾದ ಭಾರತಿ ಕೆ. ಕಾರ್ಯಕ್ರಮ ನಿರೂಪಿಸಿ, ರೂಪ ವಂದಿಸಿದರು. ಕಾವ್ಯ, ಭಾರತಿ, ಅಶ್ವಿನಿ ಮತ್ತು ನಿವೇದಿತಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.