ಪಡ್ನೂರು ಬಿಲ್ಲವ ಗ್ರಾಮ ಸಮಿತಿ, ಮಹಿಳಾ ವೇದಿಕೆಯಿಂದ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ

0

ಪುತ್ತೂರು: ಪಡ್ನೂರು ಮತಾವು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಟ್ರಸ್ಟ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.8 ರಂದು ಪಡ್ನೂರು ಕೊಡಂಗೆಗುತ್ತು ವಾಸು ಪೂಜಾರಿರವರ ಮನೆಯಲ್ಲಿ ಜರಗಿತು.

ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪುತ್ತೂರು ಬಿಲ್ಲವ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುವಲ್ಲಿ ಪಡ್ನೂರು ಬಿಲ್ಲವ ಗ್ರಾಮ ಸಮಿತಿಯ ಸಹಕಾರ ಬಹಳಷ್ಟಿದೆ. ಪಡ್ನೂರು ಗ್ರಾಮ ಸಮಿತಿಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಯಶಸ್ವಿ ಗ್ರಾಮ ಸಮಿತಿ ಎನಿಸಿಕೊಂಡಿದೆ ಎಂದು ಹೇಳಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಪಡ್ನೂರು ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ವಾಸು ಪೂಜಾರಿ ಕೊಡಂಗೆಗುತ್ತುರವರು ವಹಿಸಿದ್ದರು. ಅತಿಥಿಗಳಾಗಿ
ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಜೊತೆ ಕಾರ್ಯದರ್ಶಿ ದಯಾನಂದ ಕರ್ಕೇರಾ, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಕೋಲಾಡಿ, ಬಿಲ್ಲವ ವಲಯ ಸಂಚಾಲಕ ಹಾಗೂ ಪುತ್ತೂರು ಯುವವಾಹಿನಿ ಅಧ್ಯಕ್ಷ ಅಣ್ಣಿ ಪೂಜಾರಿ ಚಿಕ್ಕಮುಡ್ನೂರುರವರು ಉಪಸ್ಥಿತರಿದ್ದರು.

ಅಭಿನಂದನೆ:
ಎಸೆಸ್ಸೆಲ್ಸಿ, ಪಿಯುಸಿ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ ಸಾಧನೆ ಮಾಡಿದ ಮೂವರು ವಿದ್ಯಾರ್ಥಿಗಳಾದ ರೋಶನಿ ಎಸ್.ಕೆ, ದೀಕ್ಷಾ ಪಿ.ಜಿ, ಸುಶಾಂತ್ ರವರನ್ನು ಅಭಿನಂದಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಆಯ್ಕೆಯಾದ ಮನೋಹರ್ ಅರುವಾರರವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಕೃಪಾ ಪ್ರಾರ್ಥಿಸಿದರು. ವಸಂತ ದೇಂತಡ್ಕ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪದ್ಮಪ್ಪ ಪೂಜಾರಿ ವರದಿಯನ್ನು, ಲೆಕ್ಕಪತ್ರವನ್ನು ಕೋಶಾಧಿಕಾರಿ ದಾಮೋದರ್ ನೆಲಪ್ಪಾಲುರವರು ಮಂಡಿಸಿದರು. ಪುತ್ತೂರು ಬಿಲ್ಲವ ಸಂಘದ ಉಪಾಧ್ಯಕ್ಷೆ ವಿಮಲ ಸುರೇಶ್ ಪೂಜಾರಿ ವಂದಿಸಿದರು.

ಈ ಸಂದರ್ಭದಲ್ಲಿ ಮುಂದಿನ ಮೂರು ವರ್ಷಕ್ಕೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಅಧ್ಯಕ್ಷರಾಗಿ ರವಿಚಂದ್ರ ಪಡ್ಡಾಯೂರು, ಕಾರ್ಯದರ್ಶಿಯಾಗಿ ಪದ್ಮಪ್ಪ ಪೂಜಾರಿ ಮತಾವು, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ, ಜೊತೆ ಕಾರ್ಯದರ್ಶಿಯಾಗಿ ರೋಹನ್ ರಾಜ್ ಮಾವಿನಕಟ್ಟೆ, ಕೋಶಾಧಿಕಾರಿಯಾಗಿ ಮಧುಸೂದನ್ ಪಡ್ಡಾಯೂರು, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆಯಾಗಿ ಸವಿತಾ ನೆಲಪ್ಪಾಲು, ಕಾರ್ಯದರ್ಶಿಯಾಗಿ ಯಶೋಧ ಕೂಟೇಲು, ಉಪಾಧ್ಯಕ್ಷೆಯಾಗಿ ಸುಶೀಲಾ ಜೆ.ಪಡ್ಡಾಯೂರುರವರು ಆಯ್ಕೆಯಾದರು.

LEAVE A REPLY

Please enter your comment!
Please enter your name here