ಕೊಯಿಲ ಎರ್ಮಡ್ಕ ಸೇತುವೆಯ ತಡೆಗೋಡೆ ಕುಸಿತ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

0

ಆಲಂಕಾರು: ಮೇ.30ರಂದು ಸುರಿದ ಧಾರಕಾರ ಮಳೆಗೆ ಕೊಯಿಲ ಗ್ರಾಮದ ಎರ್ಮಡ್ಕ ಎಂಬಲ್ಲಿರುವ ಸೇತುವೆಯ ತಡೆಗೊಡೆ ಕುಸಿದು ಬೃಹತ್ ತೋಡಿನ ಪಕ್ಕದ ಮನೆ ಅಪಾಯಕಾರಿ ಸ್ಥಿತಿಯಲ್ಲಿರುವ ಪ್ರದೇಶವನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ, ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲ ವರ್ಗೀಸ್ ಅವರಿಗೆ ಸಾರ್ವಜನಿಕ ಪ್ರದೇಶದಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಿದರು.


ಈ ಪ್ರದೇಶಕ್ಕೂ ಆಯುಕ್ತರು ಭೇಟಿ ಪರಿಶೀಲನೆ ನಡೆಸಿದ ವರದಿಯಾದರದಲ್ಲಿ ಸಂಬಂಧಪಟ್ಟ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಕೃಷಿಕ ಸಮಾಜ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಕೊಯಿಲ ಶಕ್ತಿ ಕೇಂದ್ರದ ಅಧ್ಯಕ್ಷ ರವಿ ಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ನಾಯ್ಕ ಏಣಿತ್ತಡ್ಕ, ಚಾರ್ವಾಕ ಸಿ.ಎ ಬ್ಯಾಂಕ್ ಅಧ್ಯಕ್ಷ ಗಣೇಶ್ ಉದನಡ್ಕ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ, ಸ್ಥಳಿಯರಾದ. ಧನಂಜಯ ಎರ್ಮಡ್ಕ,‌ ಗಣೇಶ್ ಎರ್ಮಡ್ಕ,ನಿರಂಜನ ನಾಯ್ಕ ಏಣಿತಡ್ಕ, ನೇತ್ರಾಕ್ಷ‌ ಏಣಿತ್ತಡ್ಕ ಸುಂದರ ನಾಯ್ಕ ಚೆಕ್ಕಿತ್ತಡ್ಕ ,ಬಾಲಕೃಷ್ಣ ನಾಯ್ಕ ಏಣಿತ್ತಡ್ಕ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here