ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2025-26ರ ವಿದ್ಯಾರ್ಥಿ ಸಂಘಕ್ಕೆ ಆಯ್ಕೆ

0


ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ ಜೂ.6ರಂದು ಸಂಸ್ಥೆಯ ಸಂಚಾಲಕ ಗೋಕುಲ್‌ನಾಥ್ ಪಿ.ವಿ. ಮಾರ್ಗದರ್ಶನದಲ್ಲಿ ನಡೆಯಿತು.

ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಮತ ಚಲಾಯಿಸುವ ಮೂಲಕ ಆರಿಸಲಾಯಿತು. ಕಾಲೇಜಿನ ನಾಯಕನಾಗಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಗುರುಪ್ರಸಾದ್, ವಿರೋಧ ಪಕ್ಷದ ನಾಯಕನಾಗಿ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗ ಆಲ್ವಿನ್ ನೊರೋನಾ ಅವರನ್ನು ಆಯ್ಕೆ ಮಾಡಲಾಯಿತು. ಇನ್ನುಳಿದಂತೆ ದ್ವಿತೀಯ ಪಿ.ಯು.ಸಿ. ವಿಜ್ಞಾನ ವಿಭಾಗದ ಕೀರ್ತನಾ ವಿದ್ಯಾ ಮಂತ್ರಿಯಾಗಿ, ಆದಿತ್ಯಾ ಸಾಂಸ್ಕ್ರತಿಕ ಮಂತ್ರಿಯಾಗಿ ಮತ್ತು ಸ್ವಚ್ಛತಾ ಮಂತ್ರಿಯಾಗಿ ಭಾರದ್ವಾಜ್ ಅವರನ್ನು ಆಯ್ಕೆ ಮಾಡಲಾಯಿತು. ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ಕೆ.ಡಿ. ಜಗದೀಶ್ ಹಣಕಾಸು ಮಂತ್ರಿಯಾಗಿ, ಕಾನೂನು ಮಂತ್ರಿಯಾಗಿ ಕುಶಾಲ್ ಕಾರ್ಯಪ್ಪ, ಮನೋಜ್ ಆಹಾರ ಮತ್ತು ಆರೋಗ್ಯ ಮಂತ್ರಿಯಾಗಿ ಮತ್ತು ದ್ವಿತೀಯ ಪಿ.ಯು.ಸಿ. ಕಲಾ ವಿಭಾಗದ ಮಹೇಶ್ ಗೌಡ ಅವರನ್ನು ಕ್ರೀಡಾ ಮಂತ್ರಿಯಾಗಿ ಆಯ್ಕೆ ಮಾಡಲಾಯಿತು ಎಂದು ಸಂಸ್ಥೆಯ ಪ್ರಾಂಶುಪಾಲೆ ಕೆ. ಹೇಮಲತಾ ಗೋಕುಲ್‌ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯರು, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here