ನಾಳೆ (ಜೂ.12) ತುರ್ತು ಕಾಮಗಾರಿ ನಿಮಿತ್ತ ಈ ಪ್ರದೇಶಗಳಲ್ಲಿ ಕರೆಂಟ್ ಇಲ್ಲ!

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ ಜೂ.12ರಂದು ಪೂರ್ವಾಹ್ನ ಗಂಟೆ10:00 ರಿಂದ ಅಪರಾಹ್ನ 5:00 ರ ವರೆಗೆ ಕೆದಿಲ ಮತ್ತು ಕಬಕ ಫೀಡರ್‌ಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಕೊಡಿಪ್ಪಾಡಿ, ಪಡ್ನೂರು, ಮುರ, ಕಬಕ ಮತ್ತು ವಿದ್ಯಾಪುರ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ತುರ್ತು ಕಾಮಗಾರಿ ನಿಮಿತ್ತ ಜೂ.12ರಂದು ಪೂರ್ವಾಹ್ನ ಗಂಟೆ10:00 ರಿಂದ ಅಪರಾಹ್ನ 5:00 ರ ವರೆಗೆ ನಗರ, ಕಾಂಚನ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಫೀಡರ್‌ಗಳಿಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ವ್ಯಾಪ್ತಿಯ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here