ಪುತ್ತೂರು: ಕೆದಂಬಾಡಿ ಗ್ರಾಂ ಪಂಚಾಯತ್ನ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಸಂಬಂಧವಾಗಿ ವಿಶೇಷ ಗ್ರಾಮ ಸಭೆಯು ಜೂ.6ರಂದು ಗ್ರಾಪಂ ಸಭಾಂಗಣದಲ್ಲಿ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಇದರ ಸಹಾಯಕ ನಿರ್ದೇಶಕರಾದ ವಿಷ್ಣುಪ್ರಸಾದ್ರವರು ನೋಡೆಲ್ ಅಧಿಕಾರಿಯಾಗಿ ನಡೆಸಿಕೊಟ್ಟರು. ಸಭೆಯಲ್ಲಿ ನರೇಗಾದ ವಿವಿಧ ಯೋಜನೆಗಳ ಯಶಸ್ವಿ ಅನುಷ್ಠಾನದ ಬಗ್ಗೆ ಮಾಹಿತಿ ನೀಡಲಾಯಿತು. ಇದಲ್ಲದೆ ಗ್ರಾಮಸ್ಥರಿಂದ ವಿವಿಧ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲಾಯಿತು.ನರೇಗಾ ತಾಲೂಕು ಸಂಯೋಜಕರಾದ ಪ್ರವೀಣ್ರವರು ಮಾಹೀತಿ ನೀಡಿದರು.
ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್ ಬೀಡು, ನರೇಗಾ ಇಂಜಿನಿಯರ್ ಕುಶ್ ಕುಮಾರ್ ಉಪಸ್ಥಿತರಿದ್ದರು. ಸಭೆಯಲ್ಲಿ ಗ್ರಾಪಂ ಸದಸ್ಯರುಗಳಾದ ರತನ್ ರೈ ಕುಂಬ್ರ, ಪ್ರವೀಣ್ ಶೆಟ್ಟಿ ತಿಂಗಳಾಡಿ, ರೇವತಿ ಬೋಳೋಡಿ, ವಿಠಲ ರೈ ಮಿತ್ತೋಡಿ, ಸುಜಾತ ರೈ ಸೇರಿದಂತೆ ನರೇಗಾ ಫಲಾನುಭವಿಗಳು, ಸಂಜೀವಿನಿ ಒಕ್ಕೂಟದವರು, ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳಾದ ಜಯಂತ ಮೇರ್ಲ, ಮೃದುಳಾ ಬಾಲಯ, ಗಣೇಶ್, ವಿದ್ಯಾಪ್ರಸಾದ್, ಶಶಿಪ್ರಭಾ ರೈ ಸಹಕರಿಸಿದ್ದರು.
