ಕೆಯ್ಯೂರು ಗ್ರಾಪಂ ವಿಪತ್ತು ನಿರ್ವಹಣಾ ಸಮಿತಿ ಸಭೆ

0

ಅಪಾಯಕಾರಿ ಸ್ಥಳಗಳಿಗೆ ಸೂಚನಾ ಫಲಕ ಅಳವಡಿಕೆ-ನಿರ್ಣಯ

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಅಧ್ಯಕ್ಷತೆಯಲ್ಲಿ ಜೂ.12 ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಮಳೆಗಾಲದಲ್ಲಿ ಸಂಭವಿಸಬಹುದಾಗಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಗ್ರಾಮದ ವಿವಿಧ ಕಡೆಗಳಲ್ಲಿ ವಿದ್ಯುತ್ ತಂತಿ, ವಾಹನ ಸಂಚಾರಕ್ಕೆ ಅಪಾಯ ತರಬಲ್ಲಂತಹ ಮರಗಳನ್ನು ಅಥವಾ ಮರದ ಗೆಲ್ಲುಗಳನ್ನು ತೆರವು ಮಾಡುವ ಬಗ್ಗೆ ನಿರ್ಣಯ ಮಾಡಿಕೊಂಡು ಈ ಬಗ್ಗೆ ಸಹಾಯಕ ಕಮೀಷನರ್, ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಬರೆದುಕೊಳ್ಳುವುದು ಎಂದು ನಿರ್ಣಯಿಸಲಾಯಿತು. ಗ್ರಾಮದಲ್ಲಿರುವ ಅಪಾಯಕಾರಿ ಅನ್ನಿಸುವ ಕೆರೆ, ಹಳ್ಳ, ತೋಡು, ನದಿ, ಕಾಲು ಸಂಕ ಇತ್ಯಾದಿಗಳ ಬಳಿ ಅಪಾಯ ಇದೆ ಎಚ್ಚರಿಕೆ' ಎಂಬಿತ್ಯಾದಿ ಬರಹಗಳಿರುವ ಸೂಚನಾ ಫಲಕಗಳನ್ನು ಅಳವಡಿಸುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆಯವರು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಕೆಯ್ಯೂರು ಕೆಪಿಎಸ್ ಪ್ರಾಂಶುಪಾಲರಾದ ಹಸೀನಾ ಬಾನು, ಶಾಲಾ ಮುಖ್ಯಗುರು ಬಾಬು, ಉಪ ಪ್ರಾಂಶುಪಾಲ ವಿನೋದ್ ಕುಮಾರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಕಂದಾಯ ಇಲಾಖೆಯ ಗ್ರಾಮ ಸಹಾಯಕ ನಾರಾಯಣ್ ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು. ಇದೇ ಸಂದರ್ಭದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ-೨೦೨೫ ರ ಪ್ರಮಾಣ ವಚನ ಸ್ವೀಕರಿಸಲಾಯಿತು.

ಮಳೆಗಾಲದಲ್ಲಿ ಗ್ರಾಮದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಪಂಚಾಯತ್ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದೆ. ತುರ್ತಾಗಿ ಗ್ರಾಮದಲ್ಲಿರುವ ಅಪಾಯಕಾರಿ ಅನ್ನಿಸುವ ಸ್ಥಳಗಳಿಗೆ ಸೂಚನಾ ಫಲಕಗಳನ್ನು ಅಳವಡಿಸುತ್ತಿದ್ದೇವೆ.’
ಶರತ್ ಕುಮಾರ್ ಮಾಡಾವು, ಅಧ್ಯಕ್ಷರು ಕೆಯ್ಯೂರು ಗ್ರಾಪಂ

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನ ವಿಪತ್ತು ನಿರ್ವಹಣಾ ಸಮಿತಿ ಸಭೆಯು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವುರವರು ಅಧ್ಯಕ್ಷತೆಯಲ್ಲಿ ಜೂ.೧೨ ರಂದು ಗ್ರಾಪಂ ಸಭಾಂಗಣದಲ್ಲಿ ನಡೆಯಿತು.

ಮಳೆಗಾಲದಲ್ಲಿ ಸಂಭವಿಸಬಹುದಾಗಿ ಪ್ರಾಕೃತಿಕ ವಿಕೋಪಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಗ್ರಾಮದ ವಿವಿಧ ಕಡೆಗಳಲ್ಲಿ ವಿದ್ಯುತ್ ತಂತಿ, ವಾಹನ ಸಂಚಾರಕ್ಕೆ ಅಪಾಯ ತರಬಲ್ಲಂತಹ ಮರಗಳನ್ನು ಅಥವಾ ಮರದ ಗೆಲ್ಲುಗಳನ್ನು ತೆರವು ಮಾಡುವ ಬಗ್ಗೆ ನಿರ್ಣಯ ಮಾಡಿಕೊಂಡು ಈ ಬಗ್ಗೆ ಸಹಾಯಕ ಕಮೀಷನರ್, ತಾಪಂ ಕಾರ್ಯನಿರ್ವಹಣಾಧಿಕಾರಿಗೆ ಬರೆದುಕೊಳ್ಳುವುದು ಎಂದು ನಿರ್ಣಯಿಸಲಾಯಿತು.

ಗ್ರಾಮದಲ್ಲಿರುವ ಅಪಾಯಕಾರಿ ಅನ್ನಿಸುವ ಕೆರೆ, ಹಳ್ಳ, ತೋಡು, ನದಿ, ಕಾಲು ಸಂಕ ಇತ್ಯಾದಿಗಳ ಬಳಿ ಅಪಾಯ ಇದೆ ಎಚ್ಚರಿಕೆ' ಎಂಬಿತ್ಯಾದಿ ಬರಹಗಳಿರುವ ಸೂಚನಾ ಫಲಕಗಳನ್ನು ಅಳವಡಿಸುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಮಿತಾ ಎ.ಕೆಯವರು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು. ಸಭೆಯಲ್ಲಿ ಕೆಯ್ಯೂರು ಕೆಪಿಎಸ್ ಪ್ರಾಂಶುಪಾಲರಾದ ಹಸೀನಾ ಬಾನು, ಶಾಲಾ ಮುಖ್ಯಗುರು ಬಾಬು, ಉಪ ಪ್ರಾಂಶುಪಾಲ ವಿನೋದ್ ಕುಮಾರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಶಿಕ್ಷಕಿಯರು, ಕಂದಾಯ ಇಲಾಖೆಯ ಗ್ರಾಮ ಸಹಾಯಕ ನಾರಾಯಣ್ ಉಪಸ್ಥಿತರಿದ್ದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸ್ವಾಗತಿಸಿ, ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದ್ದರು.

ಮಳೆಗಾಲದಲ್ಲಿ ಗ್ರಾಮದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಪಂಚಾಯತ್ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಂಡಿದೆ. ತುರ್ತಾಗಿ ಗ್ರಾಮದಲ್ಲಿರುವ ಅಪಾಯಕಾರಿ ಅನ್ನಿಸುವ ಸ್ಥಳಗಳಿಗೆ ಸೂಚನಾ ಫಲಕಗಳನ್ನು ಅಳವಡಿಸುತ್ತಿದ್ದೇವೆ.’
ಶರತ್ ಕುಮಾರ್ ಮಾಡಾವು, ಅಧ್ಯಕ್ಷರು ಕೆಯ್ಯೂರು ಗ್ರಾಪಂ

LEAVE A REPLY

Please enter your comment!
Please enter your name here