ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ಇವರನ್ನು ನೇಮಕಗೊಳಿಸಲಾಯಿತು. ಇವರು ಸುಮಾರು 21 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಮಂಗಳೂರಿನ ರಾಮಕೃಷ್ಣ ಪದವಿ ಕಾಲೇಜು, ಮಹೇಶ್ ಪದವಿಪೂರ್ವ ಕಾಲೇಜು ಹಾಗೂ ಪನಾ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. 2019 ರಿಂದ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 2023ರಿಂದ ಕಾಲೇಜಿನ ಉಪಪ್ರಾಂಶುಪಾಲರಾಗಿ ಪದೋನ್ನತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು.
ಮೂಲತಃ ಪುತ್ತೂರಿನ ತಿಂಗಳಾಡಿಯ ನಿವಾಸಿಯಾಗಿರುವ ಇವರು ದಿ.ವಾಸುದೇವ ರೈ ಹಾಗೂ ಗಂಗಾರತ್ನ ವಿ ರೈ ಇವರ ಪುತ್ರ. ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಇವರು ಪುತ್ತೂರಿನ ರೋಟರಿ ಯುವದ ಕಾರ್ಯದರ್ಶಿಗಳಾಗಿ , ತಿಂಗಳಾಡಿಯ ರೊಟ್ರಾಕ್ಟ್ ಅಧ್ಯಕ್ಷರಾಗಿ ಹಾಗೂ ರೊಟ್ರಾಕ್ಟ್ ಜಿಲ್ಲೆ 3181 ಇದರ ಜಿಲ್ಲಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಜೂನ್ ತಿಂಗಳಿನಿಂದ ಇವರನ್ನು ನೇಮಿಸಿರುತ್ತಾರೆ. ಅಪರಾಹ್ನ ನೂತನ ಪ್ರಾಂಶುಪಾಲರ ಪದಗ್ರಹಣ ಸಮಾರಂಭ ನಡೆಯಿತು.

ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಕಾರ್ಯದರ್ಶಿಗಳಾದ ಡಾ. ಕೆ ಎಮ್. ಕೃಷ್ಣ ಭಟ್, ಉಪಾಧ್ಯಕ್ಷರಾದ ಸತೀಶ್ರಾವ್, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾರದ ವೆಂಕಟರಮಣ ರಾವ್ಮಂಕುಡೆ, ನೂತನ ಪ್ರಾಂಶುಪಾಲರ ಮಾತೃಶ್ರೀಯವರಾದ ಗಂಗಾರತ್ನ ವಿ. ರೈ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಸಂಚಾಲಕರಾದ ಎಮ್. ಗೋಪಾಲಕೃಷ್ಣ ಭಟ್, ಕೋಶಾಧಿಕಾರಿಗಳಾದ ಸಚಿನ್ ಶೆಣೈ , ನಿರ್ದೇಶಕರಾದ ವತ್ಸಲಾ ರಾಜ್ಞಿ, ಡಾ. ಕೆ. ಎನ್ ಸುಬ್ರಹ್ಮಣ್ಯ, ಡಾ. ಮುರಳೀಕೃಷ್ಣ ರೈ, ಡಾ.ಕೃಷ್ಣಪ್ರಸನ್ನ ಕೆ , ವಸತಿ ನಿಲಯಗಳ ಅಧ್ಯಕ್ಷರಾದ ರಮೇಶ್ ಪ್ರಭು, ವಿವಿಧ ಸಂಸ್ಥೆಗಳ ಪ್ರಾಂಶುಪಾಲರುಗಳು, ಮುಖ್ಯೋಪಾಧ್ಯಾಯರು ಹಾಗೂ ಉಪನ್ಯಾಸಕ-ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದು ಶುಭ ಹಾರೈಸಿದರು.