ನೆಲ್ಯಾಡಿ: ಉದನೆ ಬಿಷಪ್ ಪೋಳಿಕಾರ್ಪೋಸ್ ಕಿಂಡರ್ ಗಾರ್ಟನ್ನಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಪುಟಾಣಿಗಳ ಪ್ರವೇಶೋತ್ಸವ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.

ಬ್ಯಾಂಡ್ ವಾದ್ಯ ಘೋಷಗಳೊಂದಿಗೆ ಪುಟಾಣಿ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆ ತಂದು ತರಗತಿ ಕೋಣೆಗಳಿಗೆ ಸ್ವಾಗತಿಸಲಾಯಿತು.ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್ ಅವರು ಕಲಿಕೆಗೆ ಮೊದಲ ಹೆಜ್ಜೆ ಇಡುತ್ತಿರುವ ಪುಟಾಣಿಗಳ ಕೈ ಹಿಡಿದು ಅಕ್ಷರ ಜ್ಞಾನದ ಮುನ್ನುಡಿ ಬರೆಸುವ ಮೂಲಕ ಅಕ್ಷರಾಭ್ಯಾಸ ಮಾಡಿ ಹರಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಜಾನ್ ಕೆ.ಕೆ., ಮುಖ್ಯಗುರು ಸಿಬಿಚ್ಚನ್ ಟಿ.ಸಿ., ಕೆ.ಜಿ ವಿಭಾಗದ ಮುಖ್ಯಸ್ಥರಾದ ವಿನೀತಾ ತಂಗಚ್ಚನ್, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ರಮ್ಯಾ ಸ್ವಾಗತಿಸಿ, ಶಿಕ್ಷಕಿ ಅನ್ನಮ್ಮ ವಂದಿಸಿದರು. ಶಿಕ್ಷಕಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.