ಪುತ್ತೂರು: ಏರ್ ಇಂಡಿಯಾ ವಿಮಾನವು ಅಹಮದಾಬಾದ್ ನಲ್ಲಿ ಪತನಗೊಂಡ ಘಟನೆಗೆ ಪುತ್ತೂರು ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಕಾಲೇಜು ವಿದ್ಯಾರ್ಥಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಘಟನೆ ನಾಗರಿಕ ವಿಮಾನಯಾನ ಇತಿಹಾಸದಲ್ಲಿಯೇ ಅತ್ಯಂತ ಭೀಕರ ದುರಂತವಾಗಿದೆ ಎಂದು ಹೇಳಿರುವ ಸಂಸ್ಥೆಯ ಆಡಳಿತಾಧಿಕಾರಿ ಸ್ನಿಗ್ಧಾ ಆಳ್ವ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದರು. ದುರಂತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲೆಂದು, ಭವಿಷ್ಯದಲ್ಲಿ ಇಂತಹ ಘಟನೆಯು ಮರುಕಳಿಸದಿರಲೆಂದು ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.