ಪಡುಮಲೆ ಮರಾಟಿ ಸಮಾಜ ಸೇವಾ ಸಂಘದ ದಶಮಾನೋತ್ಸವ ಅಂಗವಾಗಿ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ

0

ಬಡಗನ್ನೂರು:  ಮರಾಟಿ ಸಮಾಜ ಸೇವಾ ಸಂಘ (ರಿ) ಕೊಂಬೆಟ್ಟು ಪುತ್ತೂರು  ಇದರ ಗ್ರಾಮೀಣ ಶಾಖೆ ಮರಾಟಿ ಸಮಾಜ ಸೇವಾ ಸಂಘ ಪಡುಮಲೆ ಬಡಗನ್ನೂರು – ಪಡುವನ್ನೂರು ಇದರ ದಶಮಾನೋತ್ಸವ ಅಂಗವಾಗಿ ಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಜೂ.14ರಂದು ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಜೂ.14ರಂದು ಪೂರ್ವಾಹ್ನ ಗಂ.9 ಗಣಪತಿ ಹವನ, ನಡೆದು ಬಳಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೂಂಡಿತ್ತು. ಮಧ್ಯಾಹ್ನ 12.45ಕ್ಕೆ ಶ್ರೀ ದೇವರಿಗೆ ಮಹಾಪೂಜೆ ಬಳಿಕ ಶ್ರೀ ಸತ್ಯನಾರಾಯಣ ದೇವರಿಗೆ ಮಹಾಪೂಜೆ ನಡೆಯಿತು.

ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಮಿತಿ ಗೌರವಾಧ್ಯಕ್ಷೆ ಯಮುನಾ ವೖೆಕೆ ನಾಯ್ಕ ಪಟ್ಟೆ, , ಅಧ್ಯಕ್ಷ ಅಪ್ಪಯ್ಯ ನಾಯ್ಕ ತಲೆಂಜಿ, ಕಾರ್ಯದರ್ಶಿ ನಾರಾಯಣ ನಾಯ್ಕ ಪೇರಾಲು, ಕೋಶಾಧಿಕಾರಿ ಶ್ರೀಧರ ನಾಯ್ಕ ನೇಲ್ಲಂಪಾಡಿ, ಶ್ರೀ ಕ್ಷೇತ್ರ ಪಡುಮಲೆ  ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ರೖೆ ಕಟ್ಟಾವು, ಮಾಜಿ ಅಧ್ಯಕ್ಷ ಮನೋಜ್ ರೖೆ ಪೇರಾಲು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಭಟ್ ಚಂದುಕೂಡ್ಲು, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜನಾರ್ಧನ ಪೂಜಾರಿ ಪದಡ್ಕ, ಶಂಕರಿ ಪಟ್ಟೆ, ಗೋಪಾಲ ನಾಯ್ಕ ದೊಡ್ಡಡ್ಕ, ಪುತ್ತೂರು ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಪೂವಪ್ಪ ನಾಯ್ಕ, ಕುಂಞಕಮೇರು, ಮೋಹನ್ ಮುಂಡೊವುಮೂಲೆ, ಮೀನಾಕ್ಷಿ ಮಂಜುನಾಥ್, ವಸಂತಿ ಪರಮೇಶ್ವರ್, ಶ್ಯಾಮಲಾ ನಾಯ್ಕ, ರಾಮನಾಯ್ಕ ಬಳ್ಳಿಕಾನ, ಮಹಿಳಾ ವೇದಿಕೆ ಸದಸ್ಯೆ ಸುಬ್ಬಕ್ಕ ಮೋಹನ್ ನಾಯ್ಕ, ಯುವ ವೇದಿಕೆ ಅಧ್ಯಕ್ಷ  ವಸಂತ ನಾಯ್ಕ,ಜೊತೆ ಕಾರ್ಯದರ್ಶಿ ನವೀನ್ ಕುಮಾರ್, ಹಾಗೂ ಪಡುಮಲೆ ಮರಾಟಿ ಸಂಘದ ವಠಾರ ಸಂಚಾಲಕರು, ಕಾರ್ಯಕಾರಿ ಸಮಿತಿ ಹಾಗೂ ಸರ್ವಸದಸ್ಯರು  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here