ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ 

0

ಬಡಗನ್ನೂರು: ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಪ್ರತಿಭಾ ಪ್ರೌಢಶಾಲೆಯ 2025-26ನೇ ಸಾಲಿನ ಪ್ರಥಮ ಪೋಷಕರ ಸಭೆ ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ನಡೆಯಿತು.

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕರಾದ  ವಿಘ್ನೇಶ್ ಹಿರಣ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸುಸಂಸ್ಕೃತ ಸಮಾಜವನ್ನು ನಿರ್ಮಿಸುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡುವುದು ನಮ್ಮ ಮೊದಲ ಆದ್ಯತೆ ಅದಕ್ಕಾಗಿ  ಪೋಷಕರು ಸಹಕಾರ  ನೀಡುವಂತೆ ವಿನಂತಿಸಿಕೊಂಡರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ರಾಜಗೋಪಾಲ ಯನ್ ಅವರು ಶಾಲೆಯಲ್ಲಿ ನಡೆಯುವ ದೈನಂದಿನ ಚಟುವಟಿಕೆಗಳ ಬಗ್ಗೆ ತಿಳಿಯಪಡಿಸಿದರು.

ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸುಮನಾ ಬಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಈ ಸಭೆಯಲ್ಲಿ ಪೋಷಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ವಂದಿಸಿ ಗಣಿತ ಶಿಕ್ಷಕಿಯಾದ ಪ್ರೀತಿ ಕುಮಾರಿ ಎಂ ಪಿ ಯವರು ಕಾರ್ಯಕ್ರಮ ನಿರೂಪಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಶಿಕ್ಷಕರು ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.

LEAVE A REPLY

Please enter your comment!
Please enter your name here