ಪುತ್ತೂರು: ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸರಕಾರಿ ಹಿ.ಪ್ರಾ.ಶಾಲಾ ಬಳಿ ಮಳೆ ನೀರು ರಸ್ತೆಯಲ್ಲೇ ಹರಿದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇದನ್ನು ಗಮನಿಸಿದ ಶಾಸಕ ಅಶೋಕ್ ರೈ ಪಕ್ಕದ ಮನೆಯೊಂದರಿಂದ ಹಾರೆಯನ್ನು ತರಿಸಿ ರಸ್ತೆ ಬದಿಯಲ್ಲಿ ಬ್ಲಾಕ್ ಆಗಿದ್ದ ಕಣಿಯನ್ನು ಸ್ವಚ್ಚ ಮಾಡುವ ಮೂಲಕ ಮಾದರಿ ಎನಿಸಿಕೊಂಡರು.