ಪುತ್ತೂರು: ಬೆಟ್ಟಂಪಾಡಿಯಲ್ಲಿ ನಡೆದ ಬಂಟ್ಸ್ ಲೆಜೆಂಡ್ ಕಪ್ ಕ್ರಿಕೆಟ್ ಪಂದ್ಯಾಟವನ್ನು ಯಶಸ್ವಿಯಾಗಿ ಸಂಘಟಿಸಿದ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ನಿವ್ವತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಹಾಗೂ ಬಂಟ್ವಾಳ ಬಂಟರ ಸಂಘದ ವಿಶಂತಿ ಸಂಭ್ರಮದ ಕಾರ್ಯಕ್ರಮದಲ್ಲಿ ನೃತ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ ನೃತ್ಯ ಕಲಾವಿದೆ ನಯನ ವಿ.ರೈ ರವರನ್ನು ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಜೂ.12ರಂದು ಸನ್ಮಾನಿಸಿ, ಗೌರವಿಸಲಾಯಿತು.

ಪುತ್ತೂರ ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿರವರು ಮಾತನಾಡಿ ದಯಾನಂದ ರೈ ಮತ್ತು ನಯನ ವಿ.ರೈಯವರಿಗೆ ಶುಭಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ದಯಾನಂದ ರೈ ಮನವಳಿಕೆಗುತ್ತು, ಬೂಡಿಯಾರ್ ರಾಧಾಕೃಷ್ಣ ರೈ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕರುಗಳಾದ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿ, ಜಯಪ್ರಕಾಶ್ ರೈ ನೂಜಿಬೈಲು, ಬಂಟರ ಸಂಘದ ಉಪಾಧ್ಯಕ್ಷ ಸುಭಾಸ್ ಕುಮಾರ್ ಶೆಟ್ಟಿ ಆರುವಾರು, ಜೊತೆ ಕಾರ್ಯದರ್ಶಿಗಳಾದ ಸ್ವರ್ಣಲತಾ ಜೆ.ರೈ, ಹರಿಣಾಕ್ಷಿ ಜೆ.ಶೆಟ್ಟಿ, ನಿರ್ದೇಶಕರುಗಳಾದ ದಂಬೆಕ್ಕಾನ ಸದಾಶಿವ ರೈ, ಶಶಿಕಿರಣ್ ರೈ ನೂಜಿಬೈಲು, ರವಿಪ್ರಸಾದ್ ಶೆಟ್ಟ ಬನ್ನೂರು, ಇಂದುಶೇಖರ್ ಶೆಟ್ಟಿ, ಸುಧೀರ್ ಶೆಟ್ಟಿ ತೆಂಕಿಲ, ಸದಾಶಿವ ರೈ ಸೂರಂಬೈಲು, ಬಂಟರ ಸಂಘದ ವಿಶೇಷ ಅಹ್ವಾನಿತರಾದ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ತಾಲೂಕು ಮಹಿಳಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಕುಸುಮ ಪಿ.ಶೆಟ್ಟಿ ಕೆರೆಕೋಡಿ, ಸ್ವಸ್ತಿಕಾ ಶೆಟ್ಟಿ ಕುದ್ಕಾಡಿ, ತಾಲೂಕು ಯುವ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ ಉಪಸ್ಥಿತರಿದ್ದರು.
ಬಂಟರ ಸಂಘದ ಪ್ರ.ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ, ಕೋಶಾಧಿಕಾರಿ ಸಂತೋಷ ಶೆಟ್ಟಿ ಸಾಜ ವಂದಿಸಿದರು.
ಶ್ರೀ ರಾಮಕೃಷ್ಣ ಪ್ರೌಢಶಾಲೆಗೆ ಕ್ರೀಡಾ ಪರಿಕರಗಳ ಖರೀದಿಗೆ 25 ಸಾವಿರ ರೂ.
ಬೆಟ್ಟಂಪಾಡಿಯಲ್ಲಿ ಜರಗಿದ ಬಂಟ್ಸ್ ಲೆಜೆಂಡ್ ಕಪ್ ಕ್ರಿಕೆಟ್ ಟೂರ್ನ್ಮೆಂಟ್ನಲ್ಲಿ ಉಳಿಕೆಯಾದ 25 ಸಾವಿರ ರೂಪಾಯಿಯನ್ನು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢ ಶಾಲೆಗೆ ಕ್ರೀಡಾ ಪರಿಕರಗಳ ಖರೀದಿಗೆ ನೀಡಲಾಗುವುದು ಎಂದು ಸಭೆಯಲ್ಲಿ ಬಂಟರ ಸಂಘದ ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ ಮತ್ತು ನಿವ್ವತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡರವರು ತಿಳಿಸಿದರು.