ಕಾಣಿಯೂರು ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ರೋಹಿಣಿ ಸುವರ್ಣ ಅಬೀರ ಅವರಿಗೆ ಬೀಳ್ಕೊಡುಗೆ

0

ಕಾಣಿಯೂರು: ಕಾಣಿಯೂರು ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ರೋಹಿಣಿ ಸುವರ್ಣ ಅಬೀರ ಅವರಿಗೆ ಬಾಲವಿಕಾಸ ಸಮಿತಿ ಹಾಗೂ ಪೋಷಕರ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವು ಜೂ.14ರಂದು ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಅಶ್ವಿನಿ ಸುದೀಪ್ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕಿ ಆರತಿ ಪ್ರಾಸ್ತಾವಿಕ ಮಾತನಾಡಿದರು. ಕಾಣಿಯೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಕಾಣಿಯೂರು ಶಾಲಾ ಮುಖ್ಯಗುರು ಬಾಲಕೃಷ್ಣರವರು ಶುಭಹಾರೈಸಿದರು. ಬಾಲವಿಕಾಸ ಸಮಿತಿ, ಪೋಷಕರು, ವಿದ್ಯಾರ್ಥಿಗಳು, ಕಾಣಿಯೂರು ಶಾಲಾ ಹಿಂದಿನ ಮುಖ್ಯಗುರು ಪುಂಡಲಿಕ ಪೂಜಾರ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ರೋಹಿಣಿ ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ವಸಂತ ಪೆರ್ಲೋಡಿ, ಕಾಣಿಯೂರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಒಡಬಾಯಿ, ಕಾರ್ಯದರ್ಶಿ ಜಗದೀಶ್ ಗೌಡ, ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಅಗಳಿ, ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ, ಆಶಾ ಕಾರ್ಯಕರ್ತೆ ಕುಸುಮ ಹಾಗೂ ಪೋಷಕರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾ ರವಿ ಸ್ವಾಗತಿಸಿ, ದೀಪಿಕಾ ಮುಗರಂಜ ವಂದಿಸಿದರು. ಸಹಾಯಕಿ ಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here